PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್ಪಾಸ್ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು
ರಾಮನಗರದಲ್ಲಿವ್ಯಾಪಕ ಮಳೆ ಸುರಿಯುತ್ತಿದ್ದು,ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.
ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ.
ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆ