Photos | ಉಡುಪಿಯ ಕೃಷ್ಣಮಠದಲ್ಲಿ ನೆರವೇರಿದ ವಿಟ್ಲಪಿಂಡಿ ಉತ್ಸವ
ಕೋವಿಡ್ನಿಂದಾಗಿ ಸೀಮಿತ ಸಂಖ್ಯೆಯ ಭಕ್ತರ ಉಪಸ್ಥಿತಿಯಲ್ಲಿ ಮಂಗಳವಾರ ಕೃಷ್ಣಮಠದಲ್ಲಿ ವಿಟ್ಲಪಿಂಡಿ ಉತ್ಸವ ನೆರವೇರಿತು. ರಥಬೀದಿಯಲ್ಲಿ ನಡೆದ ಕೃಷ್ಣನ ಲೀಲೋತ್ಸವಗಳನ್ನು ಭಕ್ತರು ಕಣ್ತುಂಬಿಕೊಂಡರು.ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಸುವರ್ಣ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು, ಮಠದ ಸಿಬ್ಬಂದಿ ರಥವನ್ನು ಎಳೆದು ಕೃಷ್ಣನ ಸ್ಮರಣೆ ಮಾಡಿದರು. ಕನಕ ನವರತ್ನ ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೇಶ್ವರನ ಮೂರ್ತಿಗಳನ್ನು ಇಡಲಾಗಿತ್ತು. ಎರಡೂ ರಥಗಳು ರಥಬೀದಿಯ ಸುತ್ತ ಮೆರವಣಿಗೆಯಲ್ಲಿ ಸಾಗಿದವು.