ಭಾರತದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪು ಕೋಟೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ ಕ್ರೀಡಾಪಟುಗಳನ್ನು ಕೊಂಡಾಡಿದರು. ಕೋವಿಡ್ ಕಾರಣದಿಂದಾಗಿ ಕಾರ್ಯಕ್ರಮದಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಲಾಯಿತು ಹಾಗೂ ಭದ್ರತಾ ಪಡೆಗಳಿಂದ ಪೂರ್ಣ ಪ್ರಮಾಣದ ಕವಾಯತು ಕಾರ್ಯಕ್ರಮಗಳು ನಡೆಯಲಿಲ್ಲ.