Photos | ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ಬೆಂಗಳೂರು: ಪ್ರವರ್ಗ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್ ಪಾದಯಾತ್ರೆ ನಡೆಸಿದ ಲಿಂಗಾಯತ ಪಂಚಮಸಾಲಿ ಸಮುದಾಯವು ನಗರದಲ್ಲಿ ಭಾನುವಾರ ಮಹಾರ್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸುತ್ತಿದೆ. ಪಂಚಮಸಾಲಿ ಜನರ ಪಾದಯಾತ್ರೆ ಸ್ವಾತಂತ್ರ್ಯ ಉದ್ಯಾನ ತಲುಪಿದೆ. ಅರಮನೆ ಮೈದಾನದಿಂದ ಜನರು ನಡೆದುಕೊಂಡು ಸ್ವಾತಂತ್ರ್ಯ ಉದ್ಯಾನಕ್ಕೆ ಬಂದಿದ್ದಾರೆ. ಇಲ್ಲಿಯೇ ಎಲ್ಲರೂ ಉದ್ಯಾನದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.