ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ, ದಿವಂಗತ ಧಮ೯ಸಿಂಗ್ ಅವರ ಪತ್ನಿ ಪ್ರಭಾವತಿ ಮತ್ತು ಶಾಸಕ, ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ ಸಿಂಗ್ ಹಾಗೂ ಕುಟುಂಬದವರು ಭಾನುವಾರ ಮತದಾನ ಮಾಡಿದರು.
ADVERTISEMENT
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮೈಸೂರು ತಾಲ್ಲೂಕು ಗುಂಗ್ರಾಲ್ ಛತ್ರದಲ್ಲಿ ಮತ ಚಲಾಯಿಸಿದರು
ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಮತಗಟ್ಟೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಮತ ಚಲಾಯಿಸಿದರು.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕುಪ್ಪೂರು ಗ್ರಾಮಪಂಚಾಯಿತಿಯ ಅಬೂಜಿಹಳ್ಳಿ ಮತಗಟ್ಟೆಯಲ್ಲಿ ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ಮತಚಲಾಯಿಸಿದರು.
ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿಯಲ್ಲಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮತದಾನ ಮಾಡಿದರು