Photos | ವಿಜಯನಗರ ಜಿಲ್ಲೆ ರಚನೆ; ಸಚಿವ ಆನಂದ್ ಸಿಂಗ್, ಬೆಂಬಲಿಗರ ಸಂಭ್ರಮಾಚರಣೆ
ವಿಜಯನಗರ ಜಿಲ್ಲೆ ರಚಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ನಗರ ಸೇರಿದಂತೆ ಪಶ್ಚಿಮ ತಾಲ್ಲೂಕುಗಳಲ್ಲಿ ಸಂಭ್ರಮ ಮನೆ ಮಾಡಿದೆ. ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರು ಹೆಲಿಕಾಪ್ಟರ್ನಲ್ಲಿ ನಗರದ ಮುನ್ಸಿಪಲ್ ಮೈದಾನದ ಹೆಲಿಪ್ಯಾಡ್ಗೆ ಬಂದಿಳಿದು, ನೆಲಕ್ಕೆ ನಮಿಸಿದರು. ಸಚಿವರು ಬರುವ ವಿಷಯ ಮೊದಲೇ ಗೊತ್ತಾಗಿ ನೂರಾರು ಜನ ಮೈದಾನದಲ್ಲಿ ಸೇರಿದ್ದರು. ಆನಂದ್ ಸಿಂಗ್ ಬರುತ್ತಿದ್ದಂತೆ ಅವರ ಪರ ಜಯಘೋಷ ಹಾಕಿದರು. ವಿಜಯನಗರಕ್ಕೆ ಜಯವಾಗಲಿ ಎಂದು ಕೂಗಿದರು.