PHOTOS | ಶಿವಮೊಗ್ಗ: ಸ್ಫೋಟ ನಡೆದ ಕ್ರಷರ್ನಲ್ಲಿ ಈಗಿನ ಪರಿಸ್ಥಿತಿ ಹೇಗಿದೆ?
ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿದ ಪರಿಣಾಮ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಘಟನೆ ಹಿಂದಿನ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ. ಅವಘಡ ಸಂಭವಿಸಿದ ಪ್ರದೇಶದ ಚಿತ್ರಗಳನ್ನು ಇಲ್ಲಿ ಕೊಡಲಾಗಿದೆ.