ಚಿತ್ರಗಳಲ್ಲಿ ನೋಡಿ: ಕೋವಿಡ್ ಮಾರ್ಗಸೂಚಿ: ದೇವಸ್ಥಾನ, ಚಿತ್ರಮಂದಿರ, ಅಂಗಡಿಗಳು ಬಂದ್
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರಗಳಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 4 ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ.ಇದೇವೇಳೆ, ಶಾಲಾ ಕಾಲೇಜುಗಳು, ನಿನಿಮಾ ಹಾಲ್ಗಳು, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ, ಕ್ರೀಡಾ ಕಾಂಪ್ಲೆಕ್ಸ್ಗಳು, ಸ್ಟೇಡಿಯಂ, ಈಜುಕೊಳ, ಮನರಂಜನಾ ಅಮ್ಯೂಸ್ಮೆಂಟ್ ಪಾರ್ಕ್, ಬಾರ್, ಆಡಿಟೋರಿಯಂಗಳು ಬಂದ್ ಮಾಡಲು ಆದೇಶಿಸಲಾಗಿದೆ.ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಅವಕಾಶ ಇರುವುದಿಲ್ಲ. ರೆಸ್ಟೊರೆಂಟ್ಗಳಿಂದ ಪಾರ್ಸೆಲ್ ಒಯ್ಯಲು ಮಾತ್ರ ಅವಕಾಶವಿದೆ. ಮದುವೆ ಸಮಾರಂಭಕ್ಕೆ 50ಕ್ಕೆ ಜನ, ಶವ ಸಂಸ್ಕಾರ, ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶ ನೀಡಲಾಗಿದೆ. ಹಲವೆಡೆ, ಈಗಾಗಲೇ ಪೊಲೀಸರು ಹೊಸ ಮಾರ್ಗಸೂಚಿ ಜಾರಿಗೆ ಮುಂದಾಗಿದ್ದಾರೆ. ಕಾರ್ಯಾಚರಣೆಯ ಚಿತ್ರಗಳು ಇಲ್ಲಿವೆ.