‘ಕೇಂದ್ರ ಸರ್ಕಾರ ನಮ್ಮನ್ನು ಸಂಪರ್ಕಿಸದೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ. ಗುರುತಿಸಿದ್ದಕ್ಕೆ ಅನಂತ ಧನ್ಯವಾದ. ಸಮಾಜದಲ್ಲಿ ಅಸಾಧಾರಣ ಸೇವೆಗೈದ ಸಾಧಕರಿದ್ದಾರೆ. ಅಂತಹವರಿಗೆ ಇದನ್ನು ನೀಡಿದರೆ ಒಳ್ಳೆಯದು. ನಮಗೆ ಇದರ ಅವಶ್ಯಕತೆಯಿಲ್ಲ’ ಎಂದು ಸಿದ್ಧೇಶ್ವರ ಸ್ವಾಮೀಜಿ ಹೇಳಿರುವ ಮಾತಿನಿಂದ ನಮಗೆ ಅವರ ಸರಳತೆ, ನೇರ ನಿಲುವು, ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುವ ರೀತಿ ನೀತಿಗಳು ತಿಳಿಯುತ್ತವೆ.