‘ಮೋಹಿತ್ಕುಮಾರ್ ನಿಗದಿತ ಸಮಯಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿರಲಿಲ್ಲ. ವಿಮಾನ ತೆರಳಿದ ಮೇಲೆ, ಹುಸಿಬಾಂಬ್ ಕರೆ ಮಾಡಿದ್ದ. ಆರೋಪಿಯನ್ನು ಪತ್ತೆ ಹಚ್ಚಿ ಸಂಗನೇರ್ ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (ಸಿಐಎಸ್ಎಫ್) ಕಮಾಂಡಂಟ್ ವೈ.ಪಿ. ಸಿಂಗ್ ತಿಳಿಸಿದ್ದಾರೆ.