’ಭಕ್ತರಿಗೆ ದರ್ಶನ ನೀಡಬೇಕು ಎಂದು ಬೆಳಿಗ್ಗೆ ಶ್ರೀಗಳು ತಿಳಿಸಿದರು. ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ನಾವು ಹೇಳಿದೆವು. ಆದರೂ ಅವರು ಒಪ್ಪಲಿಲ್ಲ. ನಂತರ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ವೈದ್ಯರು ಬಂದು ವಿಶ್ರಾಂತಿ ಪಡೆಯುವಂತೆ ಹೇಳಿದರೂ ಶ್ರೀಗಳು ಕೇಳಲಿಲ್ಲ’ ಎಂದು ಸ್ವಾಮೀಜಿ ಸಹಾಯಕರೊಬ್ಬರು ತಿಳಿಸಿದರು.