ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಮಾವೇಶದಿಂದ ತೆರಳುತ್ತಿದ್ದವರ ಬಸ್ ಬೈಕಿಗೆ ಡಿಕ್ಕಿ; ಬಸ್‌ಗೆ ಕಲ್ಲು ತೂರಾಟ

ಬಿಜೆಪಿ ಕಾರ್ಯಕರ್ತರಿಂದ‌ ಪ್ರತಿಭಟನೆ
Last Updated 13 ಏಪ್ರಿಲ್ 2019, 14:49 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ಶನಿವಾರ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ವಾಪಸ್ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಉಳ್ಳಾಲದ ಮದನಿನಗರದಲ್ಲಿ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾಗಿದೆ. ಬಳಿಕ ಸ್ಥಳದಲ್ಲಿದ್ದ ಕೆಲವರು ಬಸ್ ಮೇಲೆ ಕಲ್ಲು ತೂರಿದ್ದಾರೆ. ಬಸ್ಸಿನಲ್ಲಿದ್ದ ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿವೆ.

ಬಳಿಕ ಸ್ಥಳದಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು, ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT