ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ವೇಳಾಪಟ್ಟಿ ಪ್ರಕಟಿಸಿತ್ತು. ಆ ಕ್ಷಣದಿಂದಲೇ ಮಾದರಿ ಚುನಾವಣಾ ನೀತಿಸಂಹಿತೆ ಜಾರಿಯಾಗಿದೆ. ಸಚಿವರು, ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ಬುಧವಾರದಿಂದಲೇ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಬಹುತೇಕರು ಮಾರ್ಗ ಮಧ್ಯದಲ್ಲೇ ಸರ್ಕಾರಿ ಕಾರು ತ್ಯಜಿಸಿದ್ದರು.