ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದಲ್ಲಿ ನಿಖಿಲ್‌ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ

Last Updated 2 ಮೇ 2019, 11:33 IST
ಅಕ್ಷರ ಗಾತ್ರ

ರಾಮನಗರ: ಮೊದಲ ಹಂತದ ಚುನಾವಣೆಯಲ್ಲಿ 10-12 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಜೊತೆಗೂಡಿ‌ ಮತ ಚಲಾಯಿಸಿದ ಬಳಿಕ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಮಂಡ್ಯದಲ್ಲಿ ನಿಖಿಲ್ ಗೆಲುವು ನಿಶ್ಚಿತ. ಅಲ್ಲಿನ ಚುನಾವಣೆಯನ್ನು ಮಾಧ್ಯಮಗಳು ವಿಪರೀತವಾಗಿ ಬಿಂಬಿಸಿದವು. ಸುಮಲತಾರಿಗೆ‌ ಮೋದಿಗಿಂತ ಹೆಚ್ಚಿನ ಪ್ರಚಾರ ಕೊಟ್ಟವು ಎಂದರು.

ಮತದಾನ ನಮ್ಮ ಹಕ್ಕು. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಮನವಿ‌‌ ಮಾಡಿದರು. ಬೆಂಗಳೂರು‌ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.‌ ಸುರೇಶ್ ಮತಗಟ್ಟೆಯ ಹೊರಗೆ ಕುಮಾರಸ್ವಾಮಿ ಅವರನ್ನು‌ ಭೇಟಿ‌ ಮಾಡಿ ಚರ್ಚಿಸಿದರು.

ಮುಖ್ಯಮಂತ್ರಿ ಭೇಟಿ‌ ಕಾರಣಕ್ಕೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಪೊಲೀಸರು ತಡೆ ಒಡ್ಡಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT