ತಾಲ್ಲೂಕಿನ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಜೊತೆಗೂಡಿ ಮತ ಚಲಾಯಿಸಿದ ಬಳಿಕ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಮಂಡ್ಯದಲ್ಲಿ ನಿಖಿಲ್ ಗೆಲುವು ನಿಶ್ಚಿತ. ಅಲ್ಲಿನ ಚುನಾವಣೆಯನ್ನು ಮಾಧ್ಯಮಗಳು ವಿಪರೀತವಾಗಿ ಬಿಂಬಿಸಿದವು. ಸುಮಲತಾರಿಗೆ ಮೋದಿಗಿಂತ ಹೆಚ್ಚಿನ ಪ್ರಚಾರ ಕೊಟ್ಟವು ಎಂದರು.