ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಚುನಾವಣಾಧಿಕಾರಿ ವಿರುದ್ಧ ತನಿಖೆ- ಸಂಜೀವ್‌ ಕುಮಾರ್‌

ನಿಖಿಲ್‌ ನಾಮಪತ್ರ ಪರಿಶೀಲನೆ ಗೊಂದಲ
Last Updated 30 ಮಾರ್ಚ್ 2019, 11:57 IST
ಅಕ್ಷರ ಗಾತ್ರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿನಿಖಿಲ್‌ ನಾಮಪತ್ರ ಪರಿಶೀಲನೆ, ಅನುಮೋದನೆ ವಿಚಾರದಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದ ಕಾರಣ ರಾಜ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಿಲ್ಲಾ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ, ಅನುಮೋದನೆ ಮಾಡಿದ ನಂತರ ಅದನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಏನೇ ಆಕ್ಷೇಪಣೆ ಇದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಚುನಾವಣಾಧಿಕಾರಿ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದರು.

ನಾಮಪತ್ರ ಪರಿಶೀಲನೆ ವೇಳೆ ಜಿಲ್ಲಾ ಚುನಾವಣಾಧಿಕಾರಿ ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಸುಮಲತಾ ಬೆಂಬಲಿಗರು ಸಂಜೀವ್‌ ಕುಮಾರ್‌ ಅವರಿಗೆ ದೂರು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT