ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜಿಲ್ಲಾ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ, ಅನುಮೋದನೆ ಮಾಡಿದ ನಂತರ ಅದನ್ನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಏನೇ ಆಕ್ಷೇಪಣೆ ಇದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಚುನಾವಣಾಧಿಕಾರಿ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದರು.