ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಲಯ ಮೇಲೆ ಐಟಿ ದಾಳಿ: ಮೋದಿಗೆ ಶಿವನ ಶಾಪ ತಟ್ಟಲಿದೆ- ಕುಮಾರಸ್ವಾಮಿ

Last Updated 12 ಏಪ್ರಿಲ್ 2019, 10:35 IST
ಅಕ್ಷರ ಗಾತ್ರ

ಕುಣಿಗಲ್: ಹರದನಹಳ್ಳಿಯಲ್ಲಿ ಎಚ್.ಡಿ.ದೇವೇಗೌಡರು ಪೂಜಿಸಿಕೊಂಡು ಬಂದ ಶಿವಾಲಯದ ಗರ್ಭಗುಡಿ, ಅರ್ಚಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿದ್ದು, ಐ.ಟಿ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಆ ಶಿವನ ಶಾಪ ತಟ್ಟಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಶಿವನ ದೇವಾಲಯದಲ್ಲಿ ದೇವೇಗೌಡರು ಹಣ ಇಟ್ಟಿದ್ದಾರೆ ಎಂದು ಹುಂಡಿ ಪರಿಶೀಲನೆ ಮಾಡಿದ್ದಾರೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು.

ದೇವೇಗೌಡರ ಕುಟುಂಬ ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡಿಲ್ಲ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ಹತ್ತೂ ತಾಲ್ಲೂಕಿಗೆ ನೀರು ಹರಿಸಲಾಗುವುದು ಎಂದರು.

11 ತಿಂಗಳಲ್ಲಿ ಮೈತ್ರಿ ಸರ್ಕಾರವು ₹ 5 ಸಾವಿರ ಕೋಟಿ ಹಣವನ್ನು ವಿವಿಧ ಅಭಿವೃದ್ಧಿ ಯೊಜನೆಗಳಿಗೆ ದೊರಕಿಸಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT