ಶುಕ್ರವಾರ ಮಧ್ಯಾಹ್ನ 12.5ರಿಂದ 1 ಗಂಟೆಯೊಳಗೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವರು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೂ ಆಹ್ವಾನ ನೀಡಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆ ಹರದನಹಳ್ಳಿ ಈಶ್ವರ ದೇವಸ್ಥಾನ, ಹೊಳೆನರಸೀಪುರ ಲಕ್ಷೀನರಸಿಂಹ ಸ್ವಾಮಿ, ಮಾವಿನಕರೆ ಬೆಟ್ಟದ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಲಾಗುವುದು. ಬಳಿಕ ನಗರದ ಎನ್. ಆರ್. ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಲಾಗುವುದು. ನಾಮಪತ್ರ ಸಲ್ಲಿಸಿದ ಬಳಿಕ ಬಹಿರಂಗ ಸಭೆ ನಡೆಸಲಾಗುವುದು ಎಂದರು.