ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ‌ ಮೋದಿ ಅಲೆ ಇಲ್ಲ: ಡಿ.ಕೆ. ಶಿವಕುಮಾರ್ 

Last Updated 18 ಏಪ್ರಿಲ್ 2019, 7:53 IST
ಅಕ್ಷರ ಗಾತ್ರ

ರಾಮನಗರ: ‘ಈ‌ ಬಾರಿ ದೇಶದಲ್ಲಿ‌ ಎಲ್ಲೂ‌ ಮೋದಿ ಅಲೆ ಇಲ್ಲ. ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದವರನ್ನು ಜನ ನಂಬುವುದಿಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿಯಲ್ಲಿ ಕುಟುಂಬದೊಂದಿಗೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆಅವರು ಮಾತನಾಡಿದರು.

‘ಅಚ್ಛೆ ದಿನ್ ಎಂದಿದ್ದರು. ಒಳ್ಳೆಯ ದಿನ ಬರಲಿಲ್ಲ. ಸ್ವಚ್ಛ ಭಾರತ್ ಎನ್ನುತ್ತಾರೆ. ವಾರಾಣಸಿಯಲ್ಲಿಯೇ ಸ್ವಚ್ಛತೆ ಇಲ್ಲ’ ಎಂದು ಲೇವಡಿ‌ ಮಾಡಿದರು.

‘ಈ ಬಾರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೈತ್ರಿ‌ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬೆ.ಗ್ರಾ. ಕ್ಷೇತ್ರದಲ್ಲಿ‌ ಜನರು ಸುರೇಶ್‌ರನ್ನು ಮತ್ತೊಮ್ಮೆ ಆಶೀರ್ವದಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT