ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಎಸ್ಆರ್ ಕಾಂಗ್ರೆಸ್‌ನ ಆಭ್ಯರ್ಥಿ ಪಟ್ಟಿಯನ್ನು ಟೀಕಿಸಿದ ಪವನ್‌ ಕಲ್ಯಾಣ್‌

Last Updated 25 ಮಾರ್ಚ್ 2019, 8:27 IST
ಅಕ್ಷರ ಗಾತ್ರ

ಮಚಲಿಪಟ್ಟಣಂ: ವೈ.ಎಸ್. ಜಗನ್‌ ಮೋಹನ್ ರೆಡ್ಡಿಯವರು ತಮಗೆ ಕಷ್ಟದ ಸಮಯದಲ್ಲಿ ಆರ್ಥಿಕ ಸಹಾಯ ಮಾಡಿದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನಿಡದೇ ಮೂಲೆಗುಂಪು ಮಾಡಿದ್ದಾರೆ ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್‌ ಕಲ್ಯಾಣ್‌ ಆರೋಪಿಸಿದ್ದಾರೆ.

ವೈಎಸ್‌ಆರ್‌ಕಾಂಗ್ರೆಸ್‌ನ ಕಾರ್ಯಕರ್ತರನ್ನು ಜಗನ್‌ ಮೋಹನ್ ರೆಡ್ಡಿ ಆರ್ಥಿಕವಾಗಿ ಶೋಷಿಸುತ್ತಿದ್ದಾರೆ ಎಂದು ಮಚಲಿಪಟ್ಟಣಂನಲ್ಲಿನಡೆದ ಚುನಾವಣಾಕಾರ್ಯಕ್ರಮದಲ್ಲಿ ಪವನ್‌ ಕಲ್ಯಾಣ್‌ ಹೇಳಿದರು

ನಾನು 2019ರ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಜನರಲ್ಲಿ ಗೊಂದಲವಿದೆ. ಅದರೂ ಯುವ ಜನರ ಪ್ರೀತಿ ಮತ್ತು ಸಹಕಾರ ನನ್ನನುಚುನಾವಣೆಯಲ್ಲಿ ಸ್ಪರ್ಧಿಸುಲು ಪ್ರೆರೇಪಿಸಿದೆ ಎಂದು ಪವನ್‌ ಕಲ್ಯಾಣ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಯಾವುದೇ ಯೋಜನೆಗಳು ಜನಸಾಮಾನ್ಯರ ಪ್ರಯೋಜನಕ್ಕೆ ಬಂದಿಲ್ಲ. ಬಾಯಿ ಮಾತಿಗೆ ಜನ ಸೇವಕರಾಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಮಚಲಿಪಟ್ಟಣಂ ಬಂದರಿನಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಚುನಾವಣೆಗಾಗಿ ಲಾಭ ಪಡೆಯಲು ಕಳೆದ ತಿಂಗಳು ಶಿಲಾನ್ಯಾಸ ಮಾಡಲಾಗಿದೆ ಎಂದು ಟಿಡಿಪಿ ಸರಕಾರವನ್ನು ಟೀಕಿಸಿದರು. ಮುಖ್ಯಮಂತ್ರಿಯಾಗುವ ಭರವಸೆಯನ್ನು ವ್ಯಕ್ತಪಡಿಸಿದ ನಟ ಪವನ್‌, ರೈತರಿಗೆ ಯಾವುದೇ ತೊಂದರೆಯಾಗದಂತೆ ಮಚಲಿಪಟ್ಟಣಂನ ಬಂದರನ್ನು ಅಭಿವೃದ್ದಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT