ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಯಾವುದೇ ಯೋಜನೆಗಳು ಜನಸಾಮಾನ್ಯರ ಪ್ರಯೋಜನಕ್ಕೆ ಬಂದಿಲ್ಲ. ಬಾಯಿ ಮಾತಿಗೆ ಜನ ಸೇವಕರಾಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಮಚಲಿಪಟ್ಟಣಂ ಬಂದರಿನಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಚುನಾವಣೆಗಾಗಿ ಲಾಭ ಪಡೆಯಲು ಕಳೆದ ತಿಂಗಳು ಶಿಲಾನ್ಯಾಸ ಮಾಡಲಾಗಿದೆ ಎಂದು ಟಿಡಿಪಿ ಸರಕಾರವನ್ನು ಟೀಕಿಸಿದರು. ಮುಖ್ಯಮಂತ್ರಿಯಾಗುವ ಭರವಸೆಯನ್ನು ವ್ಯಕ್ತಪಡಿಸಿದ ನಟ ಪವನ್, ರೈತರಿಗೆ ಯಾವುದೇ ತೊಂದರೆಯಾಗದಂತೆ ಮಚಲಿಪಟ್ಟಣಂನ ಬಂದರನ್ನು ಅಭಿವೃದ್ದಿಪಡಿಸುವುದಾಗಿ ಭರವಸೆ ನೀಡಿದ್ದಾರೆ.