ಇನ್ನೊಂದು ಚುನಾವಣಾ ರ್ಯಾಲಿಯಲ್ಲಿ ಮೋದಿ ಅವರ ಆಡಳಿತವನ್ನು ಟೀಕಿಸಿದ ಪ್ರಿಯಾಂಕಾ, ‘ದೇಶದ ಅಭಿವೃದ್ಧಿಗಾಗಿ ಮೋದಿ ನೇತೃತ್ವದ ಸರ್ಕಾರ ಏನನ್ನೂ ಮಾಡಿಲ್ಲ. ರಾಜಕಾರಣದ ಉದ್ದೇಶ ದೇಶದ ಅಭಿವೃದ್ಧಿ ಆಗಿರಬೇಕೇ ವಿನಾ ಬೇರೇನೂ ಅಲ್ಲ. ಕಾಂಗ್ರೆಸ್ ಸರ್ಕಾರವು ದುಡಿಯುವ ಕೈಗಳಿಗೆ ಕೆಲಸ ಕೊಡುವಂಥ ‘ಉದ್ಯೋಗ ಖಾತ್ರಿ ಯೋಜನೆ’ಯನ್ನು ಜಾರಿ ಮಾಡಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಕಾರ್ಮಿಕರು ಇರಬೇಕಾದ ಜಾಗದಲ್ಲಿ ಯಂತ್ರಗಳು ಬಂದು ಕುಳಿತಿವೆ. ನಿರುದ್ಯೋಗ ಹೆಚ್ಚಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರು ಮತ್ತು ಕೃಷಿಕರ ಪರವಾಗಿ ಕೆಲಸ ಮಾಡಲಿದೆ’ ಎಂದರು.