<p><strong>ನವದೆಹಲಿ: ‘</strong>ನರೇಂದ್ರ ಮೋದಿ ಅವರು ಒಂದು ವೇಳೆ ಅಧಿಕಾರಕ್ಕೆ ಮರಳಿದರೆ ಅದಕ್ಕೆ ರಾಹುಲ್ ಗಾಂಧಿ ಅವರೇ ಹೊಣೆಗಾರರು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದರು.</p>.<p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ‘ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಎಸ್ಪಿ–ಬಿಎಸ್ಪಿ ಮೈತ್ರಿ, ಕೇರಳದಲ್ಲಿ ಎಡರಂಗ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್, ರಾಜಧಾನಿಯಲ್ಲಿ ಎಎಪಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ದೂರಿದರು.</p>.<p>ಎಎಪಿ–ಕಾಂಗ್ರೆಸ್ ನಡುವಣ ಮೈತ್ರಿ ಫಲಪ್ರದವಾಗದ ರಾಜಧಾನಿಯಲ್ಲಿ ತ್ರಿಕೋನ ಸ್ಪರ್ಧೆ ನಡೆದಿದ್ದು, ಮತದಾನಕ್ಕೆ ಎರಡು ದಿನ ಮುನ್ನ ಈ ಹೇಳಿಕೆ ಹೊರಬಿದ್ದಿದೆ. ‘ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಬದಲಾಗಿ ವಿರೋಧಪಕ್ಷಗಳ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರುವಂತಿದೆ’ ಎಂದು ಹೇಳಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಪ್ರಮುಖ ಕ್ಷೇತ್ರಗಳಲ್ಲಿ ಯಾವುದೇ ಸಾಧನೆ ಆಗಿಲ್ಲ. ಮೋದಿ ಅವರ ರಾಷ್ಟ್ರೀಯತೆ ಚಿಂತನೆಯೇ ನಕಲಿಯಾಗಿದ್ದು, ದೇಶಕ್ಕೆ ಅಪಾಯಕಾರಿ. ಹೇಳಿಕೊಳ್ಳಲು ಸಾಧನೆ ಇಲ್ಲದೆ, ಸೇನೆಯ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಮನಮೋಹನ್ ಸಿಂಗ್ ಅವರು ಮೋದಿಗೆ ಹೋಲಿಸಿದಲ್ಲಿ ಸಾವಿರ ಪಟ್ಟು ಉತ್ತಮ ಪ್ರಧಾನಿ. ಈ ಚುನಾವಣೆಯ ಬಳಿಕ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ನಮ್ಮ ಏಕೈಕ ಗುರಿ ಮೋದಿ, ಶಾ ಅಧಿಕಾರಕ್ಕೆ ಮರಳದಂತೆ ತಡೆಯುವುದು. ಇದಕ್ಕಾಗಿ ಯಾರಿಗಾದರೂ ಬೆಂಬಲಿಸುತ್ತೇವೆ’ ಎಂದರು.</p>.<p>‘ರಾಜಧಾನಿಯಲ್ಲಿ ಎಎಪಿ ಉತ್ತಮ ಸಾಧನೆ ಮಾಡಲಿದೆ. ಕಳೆದ 10 ದಿನದಲ್ಲಿ ಪರಿಸ್ಥಿತಿ ಬದಲಾಗಿದೆ. 2015ರಲ್ಲಿ ಎಎಪಿ 67 ಸ್ಥಾನ ಗೆದ್ದಂತಹ ಸ್ಥಿತಿಯೇ ಈಗಲೂ ಇದೆ. ಎಲ್ಲ ಏಳು ಸ್ಥಾನವನ್ನು ಎಎಪಿ ಗೆದ್ದರೂ ನನಗೆ ಆಶ್ಚರ್ಯ ಎನಿಸುವುದಿಲ್ಲ’ ಎಂದು ಕೇಜ್ರೀವಾಲ್ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ನರೇಂದ್ರ ಮೋದಿ ಅವರು ಒಂದು ವೇಳೆ ಅಧಿಕಾರಕ್ಕೆ ಮರಳಿದರೆ ಅದಕ್ಕೆ ರಾಹುಲ್ ಗಾಂಧಿ ಅವರೇ ಹೊಣೆಗಾರರು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದರು.</p>.<p>ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ‘ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಎಸ್ಪಿ–ಬಿಎಸ್ಪಿ ಮೈತ್ರಿ, ಕೇರಳದಲ್ಲಿ ಎಡರಂಗ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್, ರಾಜಧಾನಿಯಲ್ಲಿ ಎಎಪಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ದೂರಿದರು.</p>.<p>ಎಎಪಿ–ಕಾಂಗ್ರೆಸ್ ನಡುವಣ ಮೈತ್ರಿ ಫಲಪ್ರದವಾಗದ ರಾಜಧಾನಿಯಲ್ಲಿ ತ್ರಿಕೋನ ಸ್ಪರ್ಧೆ ನಡೆದಿದ್ದು, ಮತದಾನಕ್ಕೆ ಎರಡು ದಿನ ಮುನ್ನ ಈ ಹೇಳಿಕೆ ಹೊರಬಿದ್ದಿದೆ. ‘ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಬದಲಾಗಿ ವಿರೋಧಪಕ್ಷಗಳ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಿರುವಂತಿದೆ’ ಎಂದು ಹೇಳಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಪ್ರಮುಖ ಕ್ಷೇತ್ರಗಳಲ್ಲಿ ಯಾವುದೇ ಸಾಧನೆ ಆಗಿಲ್ಲ. ಮೋದಿ ಅವರ ರಾಷ್ಟ್ರೀಯತೆ ಚಿಂತನೆಯೇ ನಕಲಿಯಾಗಿದ್ದು, ದೇಶಕ್ಕೆ ಅಪಾಯಕಾರಿ. ಹೇಳಿಕೊಳ್ಳಲು ಸಾಧನೆ ಇಲ್ಲದೆ, ಸೇನೆಯ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಮನಮೋಹನ್ ಸಿಂಗ್ ಅವರು ಮೋದಿಗೆ ಹೋಲಿಸಿದಲ್ಲಿ ಸಾವಿರ ಪಟ್ಟು ಉತ್ತಮ ಪ್ರಧಾನಿ. ಈ ಚುನಾವಣೆಯ ಬಳಿಕ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ನಮ್ಮ ಏಕೈಕ ಗುರಿ ಮೋದಿ, ಶಾ ಅಧಿಕಾರಕ್ಕೆ ಮರಳದಂತೆ ತಡೆಯುವುದು. ಇದಕ್ಕಾಗಿ ಯಾರಿಗಾದರೂ ಬೆಂಬಲಿಸುತ್ತೇವೆ’ ಎಂದರು.</p>.<p>‘ರಾಜಧಾನಿಯಲ್ಲಿ ಎಎಪಿ ಉತ್ತಮ ಸಾಧನೆ ಮಾಡಲಿದೆ. ಕಳೆದ 10 ದಿನದಲ್ಲಿ ಪರಿಸ್ಥಿತಿ ಬದಲಾಗಿದೆ. 2015ರಲ್ಲಿ ಎಎಪಿ 67 ಸ್ಥಾನ ಗೆದ್ದಂತಹ ಸ್ಥಿತಿಯೇ ಈಗಲೂ ಇದೆ. ಎಲ್ಲ ಏಳು ಸ್ಥಾನವನ್ನು ಎಎಪಿ ಗೆದ್ದರೂ ನನಗೆ ಆಶ್ಚರ್ಯ ಎನಿಸುವುದಿಲ್ಲ’ ಎಂದು ಕೇಜ್ರೀವಾಲ್ ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>