ನರೇಂದ್ರ ಮೋದಿ ಅವರು ಚುನಾವಣೆಗೆ ಮೊದಲು ಕಳೆದ ಬಾರಿ ಬಹಳ ಸತ್ಯ ಹೇಳಿದರು. ಅಚ್ಚೆ ದಿನ್, ಇಂಡಿಯಾ ಶೈನಿಂಗ್ ಅಂದ್ರು. ದೇಶದ ಜನರು ನಂಬಿ ಮತ ಹಾಕಿದರು. ಮಾಧ್ಯಮಗಳು ಪ್ರಚಾರ ಮಾಡಿದವು. ಆದರೆ, ಏನೂ ಕೊಡಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಧಾನಿಗೆ ನೆನಪು ಬರಲಿಲ್ಲ. ಚುನಾವಣೆ ಘೋಷಣೆ ಮುನ್ಮ ಮೋದಿಗೆ ರೈತರು ನೆನಪಾಗಿ ₹ 6 ಸಾವಿರ ಕೊಡುತ್ತೇವೆ ಎಂದಿದ್ದಾರೆ. ರಾಜ್ಯದಿಂದ ನಿಯೋಗದಲ್ಲಿ ತೆರಳಿ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.