ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಧವ ರಾಜೀನಾಮೆ ಅಂಗೀಕರಿಸದಂತೆ ಮನವಿ

Last Updated 20 ಮಾರ್ಚ್ 2019, 16:50 IST
ಅಕ್ಷರ ಗಾತ್ರ

ಬೆಂಗಳೂರು: ಚಿಂಚೋಳಿ ಶಾಸಕ ಉಮೇಶ ಜಾಧವ ಅವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸದಂತೆ ಸಭಾಧ್ಯಕ್ಷ ಕೆ.ಆರ್‌. ರಮೇಶಕುಮಾರ್‌ ಅವರಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬುಧವಾರ ಆಕ್ಷೇಪಣೆ ಸಲ್ಲಿಸಿದ್ದಾರೆ.

ಸಭಾಧ್ಯಕ್ಷರು ಕಚೇರಿಯಲ್ಲಿ ಇಲ್ಲದೇ ಇದ್ದುದರಿಂದ ವಿಧಾನಸಭೆ ಕಾರ್ಯದರ್ಶಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಪಿ.ಆರ್. ರಮೇಶ್ ಈ ಮನವಿ ಸಲ್ಲಿಸಿದರು. ಸಿಎಲ್‌ಪಿ ಸಭೆಗೆ ನಿರಂತರ ಗೈರಾಗುವ ಮೂಲಕ ಶಾಸಕರಾದ ಉಮೇಶ ಜಾಧವ, ರಮೇಶ ಜಾರಕಿಹೊಳಿ, ಬಿ. ನಾಗೇಂದ್ರ ಮತ್ತು ಮಹೇಶ ಕುಮಠಳ್ಳಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ್ದಾರೆ. ಈ ಬಗ್ಗೆ ಹಿಂದೆಯೇ ದೂರು ನೀಡಿ, ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವಂತೆ ಕೋರಲಾಗಿದೆ. ಆ ಬಳಿಕ ಜಾಧವ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಪಕ್ಷದ ದೂರು ಇತ್ಯರ್ಥಪಡಿಸುವರೆಗೆ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದೂ ಮನವಿಯಲ್ಲಿ ವಿನಂತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT