ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಚುನಾವಣೆ ಎಂದರೆ ಪಾಳೆಗಾರಿಕೆ ಎಂದು ತಿಳಿದಿದ್ದಾರೆ. ಹಾಸನ, ಮಂಡ್ಯ, ತುಮಕೂರು ಹೀಗೆ ಎಲ್ಲ ಕಡೆಗೂ ಅವರೇ, ಅವರ ಕುಟುಂಬದವರೇ ಇರಬೇಕು ಎಂದರೆ ಹೇಗೆ? ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪಾಳೆಗಾರಿಕೆ ಧೋರಣೆ ಸಹಿಸಲ್ಲ. ಮೂರ್ನಾಲ್ಕು ದಿನಗಳಲ್ಲಿ ದೇವೇಗೌಡರ ಸ್ಥಿತಿ ಏನು ಎಂಬುದು ಗೊತ್ತಾಗುತ್ತದೆ ಎಂದರು.