<p><strong>ಬೆಂಗಳೂರು:</strong> ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ಸಿನಿಮಾ ತಾರೆಯ ಕೈವಾಡ, ಅಂತರರಾಷ್ಟ್ರಿಯ ಮಟ್ಟದ ಹ್ಯಾಕಿಂಗ್ ಜಾಲದ ಪತ್ತೆ,ಬಿಟ್ ಕಾಯಿನ್ ಹಗರಣ... ಹೀಗೆ ಹತ್ತು ಹಲವು ಮಹತ್ತರ ಬೆಳವಣಿಗೆಗಳ ಮೂಲಕ ರಾಜ್ಯದ ರಾಜಧಾನಿಯ ‘ಅಪರಾಧ ಜಗತ್ತು’ 2021ರ ಉದ್ದಕ್ಕೂ ಸದಾ ಸುದ್ದಿಯಲ್ಲಿತ್ತು.</p>.<p>ಈ ವರ್ಷದಲ್ಲಿ ನಗರದಲ್ಲಿ ನಡೆದ ಪ್ರಮುಖ ಅಪರಾಧ ಚಟುವಟಿಕೆಗಳು, ದುರಂತಗಳ ಹಿನ್ನೋಟ ಇಲ್ಲಿದೆ.</p>.<p><strong>ಜನವರಿ</strong></p>.<p><span class="Bullet">l</span>ವಸಂತನಗರದಲ್ಲಿರುವ ಐಪಿಎಸ್ ಅಧಿಕಾರಿಗಳ ವಸತಿಸಮುಚ್ಚಯದಲ್ಲಿ ಜನವರಿ ತಿಂಗಳಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿತ್ತು.</p>.<p><span class="Bullet">l</span>ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿ ಯುವರಾಜ್ನಿಂದ ಹಣ ಪಡೆದ ಆರೋಪದಡಿ ಸಿಸಿಬಿ ಪೊಲೀಸರಿಂದ ನಟಿ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ.</p>.<p><span class="Bullet">l</span>‘ಹ್ಯಾಕಿಂಗ್ ಮೂಲಕ ದತ್ತಾಂಶ ಕದ್ದು ಅಕ್ರಮಕ್ಕೆ ಬಳಸಿಕೊಂಡಿದ್ದ ಹಾಗೂ ಕೆಲವರನ್ನು ಬ್ಲ್ಯಾಕ್ಮೇಲ್ ಮಾಡಿ ಗಳಿಸಿದ್ದ ₹ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ಗಳನ್ನು ಆರೋಪಿ ಶ್ರೀಕೃಷ್ಣನಿಂದಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದರು.</p>.<p><span class="Bullet">l</span>ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಡಿ ಬಂಧಿಸಲಾಗಿದ್ದ ರಾಜಕಾರಣಿಯೊಬ್ಬರ ಪುತ್ರ ಆದಿತ್ಯ ಆಳ್ವ ಕಸ್ಟಡಿಗೆ ಅವಧಿ ಮುಗಿದಿದ್ದರಿಂದ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.</p>.<p><span class="Bullet">l</span>ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳದ (ಎನ್ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ₹ 20 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ್ದರು.</p>.<p><span class="Bullet">l</span>ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರ ಹೆಸರು ಹೇಳಿಕೊಂಡು ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ಆರ್. ಯುವರಾಜ್ಗೆ ಸೇರಿದ್ದ ಸುಮಾರು ₹ 70 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಮಧ್ಯಂತರ ಆದೇಶ.</p>.<p><strong>ಫೆಬ್ರುವರಿ</strong></p>.<p><span class="Bullet">l</span>ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆಗಳ ವ್ಯಾಪ್ತಿಗಳಲ್ಲಿ ನಡೆದಿದ್ದ ಗಲಭೆ ಪ್ರಕರಣದ ತನಿಖೆ ನಡೆಸುತ್ತಿದ್ದ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳಿಂದ 247 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><span class="Bullet">l</span>ಡ್ರಗ್ಸ್ ಅಕ್ರಮ ಸಾಗಣೆ ಹಾಗೂ ಮಾರಾಟ ಪ್ರಕರಣದ ತನಿಖೆ ನಡೆಸಿದ ಮಾದಕ ವಸ್ತು ನಿಗ್ರಹ ಘಟಕದ (ಎನ್ಸಿಬಿ) ಅಧಿಕಾರಿಗಳಿಂದ ಕನ್ನಡದ ‘ಬಿಗ್ಬಾಸ್’ ರಿಯಾಲಿಟಿ ಶೋ ಸ್ಪರ್ಧಿ ಆಡಂ ಪಾಷಾ ಸೇರಿದಂತೆ 10 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><strong>ಮಾರ್ಚ್</strong></p>.<p><span class="Bullet">l</span> ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><span class="Bullet">l</span>ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದ ಪೂರ್ವ ವಿಭಾಗದ ಪೊಲೀಸರು, ₹4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ‘ಬಿಗ್ಬಾಸ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಮಸ್ತಾನ್ ಚಂದ್ರ ಮನೆ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು.</p>.<p><span class="Bullet">l</span>ಸಿ.ಡಿ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದೂರು. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಜವಾಬ್ದಾರಿ ವಿಶೇಷ ತನಿಖಾ ತಂಡಕ್ಕೆ ವರ್ಗಾವಣೆ.</p>.<p><span class="Bullet">l</span>‘ಕೆಲಸದ ಆಮಿಷವೊಡ್ಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ’ ಆರೋಪದಡಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು.</p>.<p><strong>ಮೇ</strong></p>.<p><span class="Bullet">l</span>₹ 360 ಕೋಟಿ ಸಾಲ ಆಮಿಷ; ‘ಚಿನ್ನದ ಮನುಷ್ಯ’ಎ. ಹರಿ ನಾಡರ್ ಅಲಿಯಾಸ್ ಹರಿ ಗೋಪಾಲಕೃಷ್ಣ ನಾಡರ್ ಬಂಧನ.<br /><strong>ಜೂನ್</strong></p>.<p><span class="Bullet">l</span>ಮಾಜಿ ಕಾರ್ಪೋರೇಟರ್ ಬಿಜೆಪಿಯ ಆರ್. ರೇಖಾ ಕದಿರೇಶ್ (43) ಹತ್ಯೆ.</p>.<p><strong>ಜುಲೈ</strong></p>.<p><span class="Bullet">l</span>ಯೆಸ್ ಬ್ಯಾಂಕ್ನಿಂದ ₹ 712 ಕೋಟಿ ಸಾಲ ಪಡೆದು ವಂಚಿಸಿರುವ ಆರೋಪದಡಿ ನಗರದ ನಿತೇಶ್ ಸಮೂಹ ಸಂಸ್ಥೆಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್.</p>.<p><strong>ಆಗಸ್ಟ್</strong></p>.<p><span class="Bullet">l</span>ನಿವೇಶನ ಮಾರಾಟ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ‘ಬೃಂದಾವನ ಪ್ರಾಪರ್ಟಿಸ್’ ಕಂಪನಿ ನಿರ್ದೇಶಕ ದಿನೇಶ್ ಎಸ್. ಗೌಡ ಬಂಧನ.</p>.<p><span class="Bullet">l</span>ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರ ಮನೆ ಅಂಗಳಕ್ಕೆ ನುಗ್ಗಿದ್ದ ದುಷ್ಕರ್ಮಿಗಳು. ಎರಡು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿ.</p>.<p><span class="Bullet">l</span>ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರು ಮಾದಕ ವಸ್ತು ಸೇವಿಸಿದ್ದ ಸಂಗತಿ ‘ಕೂದಲು ಮಾದರಿ’ ಪರೀಕ್ಷೆಯಿಂದ ದೃಢ.</p>.<p><span class="Bullet">l</span>ಮಾಗಡಿ ರಸ್ತೆಯ ಗೋಪಾಲಪುರ ಬಳಿಯ ’ಎಂ.ಎಂ. ಫುಡ್ಸ್ ಪ್ರೊಡಕ್ಟ್’ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಿಂದ ನಾಲ್ವರು ಕಾರ್ಮಿಕರ ಸಾವು.</p>.<p><strong>ಸೆಪ್ಟೆಂಬರ್</strong></p>.<p><span class="Bullet">l</span> ಕೋರಮಂಗಲದಲ್ಲಿ ನಡೆದಿದ್ದ ಅಪಘಾತದಲ್ಲಿಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ.ಪ್ರಕಾಶ್ ಅವರ ಮಗ ಸೇರಿ ಏಳು ಮಂದಿ ಸ್ಥಳದಲ್ಲೇ ದುರ್ಮರಣ.</p>.<p><span class="Bullet">l</span>ಬ್ಯಾಡರಹಳ್ಳಿ ಬಳಿಯ ತಿಗಳರಪಾಳ್ಯದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು. ಅದೇ ಮನೆಯಲ್ಲೇ ಒಂಬತ್ತು ತಿಂಗಳ ಕೂಸಿನ ಮೃತದೇಹ ಪತ್ತೆ.</p>.<p><span class="Bullet">l</span>ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ಆಶ್ರಿತ್ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಾಯಿ–ಮಗಳ ಸಾವು.</p>.<p><span class="Bullet">l</span>ಚಾಮರಾಜಪೇಟೆ ಸೀತಾಪತಿ ಅಗ್ರಹಾರದ 4ನೇ ಅಡ್ಡರಸ್ತೆಯಲ್ಲಿರುವ ಗೋದಾಮಿನಲ್ಲಿ ಭಾರಿ ಸ್ಫೋಟ. ಇಬ್ಬರ ದಾರುಣ ಸಾವು.</p>.<p><strong>ಅಕ್ಟೋಬರ್</strong></p>.<p><span class="Bullet">l</span>ಕಸ್ತೂರಿನಗರದ ಡಾಕ್ಟರ್ಸ್ ಬಡಾವಣೆಯಲ್ಲಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ.</p>.<p><span class="Bullet">l</span>ಮಳೆಯ ಅಬ್ಬರದಿಂದಾಗಿ ಕಮರ್ಷಿಯಲ್ ಸ್ಟ್ರೀಟ್ ಮುಖ್ಯರಸ್ತೆಯಲ್ಲಿದ್ದ 100 ವರ್ಷ ಹಳೇ ಕಟ್ಟಡ ಕುಸಿತ</p>.<p><strong>ನವೆಂಬರ್</strong></p>.<p><span class="Bullet">l</span>ಹೋಟೆಲೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಬಂಧನ.</p>.<p><span class="Bullet">l</span>ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಟ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರಿಂದ ನ್ಯಾಯಾಲಯಕ್ಕೆ ‘ಬಿ–ರಿಪೋರ್ಟ್’ ಸಲ್ಲಿಕೆ.</p>.<p><strong>ಡಿಸೆಂಬರ್</strong></p>.<p><span class="Bullet">l</span>ಅಪಹರಣ ಪ್ರಕರಣದ ವಿಚಾರಣೆ ನೆಪದಲ್ಲಿ ತೌಸಿಫ್ ಎಂಬುವರನ್ನು ಠಾಣೆಗೆ ಕರೆತಂದು ಥಳಿಸಿ, ಗಡ್ಡ ಕತ್ತರಿಸಿದ್ದ ಆರೋಪ: ಬ್ಯಾಟರಾಯನಪುರ ಪಿಎಸ್ಐ ಅಮಾನತು.</p>.<p><span class="Bullet">l</span>*ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಕಿಡಿಗೇಡಿಗಳ ಬಂಧನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ಸಿನಿಮಾ ತಾರೆಯ ಕೈವಾಡ, ಅಂತರರಾಷ್ಟ್ರಿಯ ಮಟ್ಟದ ಹ್ಯಾಕಿಂಗ್ ಜಾಲದ ಪತ್ತೆ,ಬಿಟ್ ಕಾಯಿನ್ ಹಗರಣ... ಹೀಗೆ ಹತ್ತು ಹಲವು ಮಹತ್ತರ ಬೆಳವಣಿಗೆಗಳ ಮೂಲಕ ರಾಜ್ಯದ ರಾಜಧಾನಿಯ ‘ಅಪರಾಧ ಜಗತ್ತು’ 2021ರ ಉದ್ದಕ್ಕೂ ಸದಾ ಸುದ್ದಿಯಲ್ಲಿತ್ತು.</p>.<p>ಈ ವರ್ಷದಲ್ಲಿ ನಗರದಲ್ಲಿ ನಡೆದ ಪ್ರಮುಖ ಅಪರಾಧ ಚಟುವಟಿಕೆಗಳು, ದುರಂತಗಳ ಹಿನ್ನೋಟ ಇಲ್ಲಿದೆ.</p>.<p><strong>ಜನವರಿ</strong></p>.<p><span class="Bullet">l</span>ವಸಂತನಗರದಲ್ಲಿರುವ ಐಪಿಎಸ್ ಅಧಿಕಾರಿಗಳ ವಸತಿಸಮುಚ್ಚಯದಲ್ಲಿ ಜನವರಿ ತಿಂಗಳಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿತ್ತು.</p>.<p><span class="Bullet">l</span>ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿ ಯುವರಾಜ್ನಿಂದ ಹಣ ಪಡೆದ ಆರೋಪದಡಿ ಸಿಸಿಬಿ ಪೊಲೀಸರಿಂದ ನಟಿ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ.</p>.<p><span class="Bullet">l</span>‘ಹ್ಯಾಕಿಂಗ್ ಮೂಲಕ ದತ್ತಾಂಶ ಕದ್ದು ಅಕ್ರಮಕ್ಕೆ ಬಳಸಿಕೊಂಡಿದ್ದ ಹಾಗೂ ಕೆಲವರನ್ನು ಬ್ಲ್ಯಾಕ್ಮೇಲ್ ಮಾಡಿ ಗಳಿಸಿದ್ದ ₹ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ಗಳನ್ನು ಆರೋಪಿ ಶ್ರೀಕೃಷ್ಣನಿಂದಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದರು.</p>.<p><span class="Bullet">l</span>ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಡಿ ಬಂಧಿಸಲಾಗಿದ್ದ ರಾಜಕಾರಣಿಯೊಬ್ಬರ ಪುತ್ರ ಆದಿತ್ಯ ಆಳ್ವ ಕಸ್ಟಡಿಗೆ ಅವಧಿ ಮುಗಿದಿದ್ದರಿಂದ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.</p>.<p><span class="Bullet">l</span>ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳದ (ಎನ್ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ₹ 20 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ್ದರು.</p>.<p><span class="Bullet">l</span>ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರ ಹೆಸರು ಹೇಳಿಕೊಂಡು ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ಆರ್. ಯುವರಾಜ್ಗೆ ಸೇರಿದ್ದ ಸುಮಾರು ₹ 70 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಮಧ್ಯಂತರ ಆದೇಶ.</p>.<p><strong>ಫೆಬ್ರುವರಿ</strong></p>.<p><span class="Bullet">l</span>ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆಗಳ ವ್ಯಾಪ್ತಿಗಳಲ್ಲಿ ನಡೆದಿದ್ದ ಗಲಭೆ ಪ್ರಕರಣದ ತನಿಖೆ ನಡೆಸುತ್ತಿದ್ದ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳಿಂದ 247 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><span class="Bullet">l</span>ಡ್ರಗ್ಸ್ ಅಕ್ರಮ ಸಾಗಣೆ ಹಾಗೂ ಮಾರಾಟ ಪ್ರಕರಣದ ತನಿಖೆ ನಡೆಸಿದ ಮಾದಕ ವಸ್ತು ನಿಗ್ರಹ ಘಟಕದ (ಎನ್ಸಿಬಿ) ಅಧಿಕಾರಿಗಳಿಂದ ಕನ್ನಡದ ‘ಬಿಗ್ಬಾಸ್’ ರಿಯಾಲಿಟಿ ಶೋ ಸ್ಪರ್ಧಿ ಆಡಂ ಪಾಷಾ ಸೇರಿದಂತೆ 10 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><strong>ಮಾರ್ಚ್</strong></p>.<p><span class="Bullet">l</span> ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ.</p>.<p><span class="Bullet">l</span>ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದ ಪೂರ್ವ ವಿಭಾಗದ ಪೊಲೀಸರು, ₹4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ‘ಬಿಗ್ಬಾಸ್’ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಮಸ್ತಾನ್ ಚಂದ್ರ ಮನೆ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು.</p>.<p><span class="Bullet">l</span>ಸಿ.ಡಿ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದೂರು. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಜವಾಬ್ದಾರಿ ವಿಶೇಷ ತನಿಖಾ ತಂಡಕ್ಕೆ ವರ್ಗಾವಣೆ.</p>.<p><span class="Bullet">l</span>‘ಕೆಲಸದ ಆಮಿಷವೊಡ್ಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ’ ಆರೋಪದಡಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು.</p>.<p><strong>ಮೇ</strong></p>.<p><span class="Bullet">l</span>₹ 360 ಕೋಟಿ ಸಾಲ ಆಮಿಷ; ‘ಚಿನ್ನದ ಮನುಷ್ಯ’ಎ. ಹರಿ ನಾಡರ್ ಅಲಿಯಾಸ್ ಹರಿ ಗೋಪಾಲಕೃಷ್ಣ ನಾಡರ್ ಬಂಧನ.<br /><strong>ಜೂನ್</strong></p>.<p><span class="Bullet">l</span>ಮಾಜಿ ಕಾರ್ಪೋರೇಟರ್ ಬಿಜೆಪಿಯ ಆರ್. ರೇಖಾ ಕದಿರೇಶ್ (43) ಹತ್ಯೆ.</p>.<p><strong>ಜುಲೈ</strong></p>.<p><span class="Bullet">l</span>ಯೆಸ್ ಬ್ಯಾಂಕ್ನಿಂದ ₹ 712 ಕೋಟಿ ಸಾಲ ಪಡೆದು ವಂಚಿಸಿರುವ ಆರೋಪದಡಿ ನಗರದ ನಿತೇಶ್ ಸಮೂಹ ಸಂಸ್ಥೆಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್.</p>.<p><strong>ಆಗಸ್ಟ್</strong></p>.<p><span class="Bullet">l</span>ನಿವೇಶನ ಮಾರಾಟ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ‘ಬೃಂದಾವನ ಪ್ರಾಪರ್ಟಿಸ್’ ಕಂಪನಿ ನಿರ್ದೇಶಕ ದಿನೇಶ್ ಎಸ್. ಗೌಡ ಬಂಧನ.</p>.<p><span class="Bullet">l</span>ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರ ಮನೆ ಅಂಗಳಕ್ಕೆ ನುಗ್ಗಿದ್ದ ದುಷ್ಕರ್ಮಿಗಳು. ಎರಡು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿ.</p>.<p><span class="Bullet">l</span>ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರು ಮಾದಕ ವಸ್ತು ಸೇವಿಸಿದ್ದ ಸಂಗತಿ ‘ಕೂದಲು ಮಾದರಿ’ ಪರೀಕ್ಷೆಯಿಂದ ದೃಢ.</p>.<p><span class="Bullet">l</span>ಮಾಗಡಿ ರಸ್ತೆಯ ಗೋಪಾಲಪುರ ಬಳಿಯ ’ಎಂ.ಎಂ. ಫುಡ್ಸ್ ಪ್ರೊಡಕ್ಟ್’ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಿಂದ ನಾಲ್ವರು ಕಾರ್ಮಿಕರ ಸಾವು.</p>.<p><strong>ಸೆಪ್ಟೆಂಬರ್</strong></p>.<p><span class="Bullet">l</span> ಕೋರಮಂಗಲದಲ್ಲಿ ನಡೆದಿದ್ದ ಅಪಘಾತದಲ್ಲಿಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ.ಪ್ರಕಾಶ್ ಅವರ ಮಗ ಸೇರಿ ಏಳು ಮಂದಿ ಸ್ಥಳದಲ್ಲೇ ದುರ್ಮರಣ.</p>.<p><span class="Bullet">l</span>ಬ್ಯಾಡರಹಳ್ಳಿ ಬಳಿಯ ತಿಗಳರಪಾಳ್ಯದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು. ಅದೇ ಮನೆಯಲ್ಲೇ ಒಂಬತ್ತು ತಿಂಗಳ ಕೂಸಿನ ಮೃತದೇಹ ಪತ್ತೆ.</p>.<p><span class="Bullet">l</span>ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ಆಶ್ರಿತ್ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಾಯಿ–ಮಗಳ ಸಾವು.</p>.<p><span class="Bullet">l</span>ಚಾಮರಾಜಪೇಟೆ ಸೀತಾಪತಿ ಅಗ್ರಹಾರದ 4ನೇ ಅಡ್ಡರಸ್ತೆಯಲ್ಲಿರುವ ಗೋದಾಮಿನಲ್ಲಿ ಭಾರಿ ಸ್ಫೋಟ. ಇಬ್ಬರ ದಾರುಣ ಸಾವು.</p>.<p><strong>ಅಕ್ಟೋಬರ್</strong></p>.<p><span class="Bullet">l</span>ಕಸ್ತೂರಿನಗರದ ಡಾಕ್ಟರ್ಸ್ ಬಡಾವಣೆಯಲ್ಲಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ.</p>.<p><span class="Bullet">l</span>ಮಳೆಯ ಅಬ್ಬರದಿಂದಾಗಿ ಕಮರ್ಷಿಯಲ್ ಸ್ಟ್ರೀಟ್ ಮುಖ್ಯರಸ್ತೆಯಲ್ಲಿದ್ದ 100 ವರ್ಷ ಹಳೇ ಕಟ್ಟಡ ಕುಸಿತ</p>.<p><strong>ನವೆಂಬರ್</strong></p>.<p><span class="Bullet">l</span>ಹೋಟೆಲೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಬಂಧನ.</p>.<p><span class="Bullet">l</span>ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಟ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರಿಂದ ನ್ಯಾಯಾಲಯಕ್ಕೆ ‘ಬಿ–ರಿಪೋರ್ಟ್’ ಸಲ್ಲಿಕೆ.</p>.<p><strong>ಡಿಸೆಂಬರ್</strong></p>.<p><span class="Bullet">l</span>ಅಪಹರಣ ಪ್ರಕರಣದ ವಿಚಾರಣೆ ನೆಪದಲ್ಲಿ ತೌಸಿಫ್ ಎಂಬುವರನ್ನು ಠಾಣೆಗೆ ಕರೆತಂದು ಥಳಿಸಿ, ಗಡ್ಡ ಕತ್ತರಿಸಿದ್ದ ಆರೋಪ: ಬ್ಯಾಟರಾಯನಪುರ ಪಿಎಸ್ಐ ಅಮಾನತು.</p>.<p><span class="Bullet">l</span>*ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಕಿಡಿಗೇಡಿಗಳ ಬಂಧನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>