<p><strong>ಬೆಂಗಳೂರು:</strong>‘ಫೋನಿ’ ಚಂಡಮಾರುತ ಹಾಗೂ ಮೇಲ್ಮೈ ಸುಳಿಗಾಳಿ ಪರಿಣಾಮ ಮಂಗಳವಾರ ಸುರಿದ ಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗರುಡಾಚಾರ್ಪಾಳ್ಯದಲ್ಲಿ ಕಾಂಪೌಂಡ್ ಕುಸಿದು ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿದ್ದ,ಪ್ರದೇಶಕ್ಕೆ ಭೇಟಿ ನೀಡಿದರು. ಕಟ್ಟಡದಮಾಲಿಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಬಳಿಕ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟಿರುವ, ಕೆ.ಆರ್.ಪುರ, ಸಿಲ್ಕ್ ಬೋರ್ಡ್ ಜಂಕ್ಷನ್, ಮಡಿವಾಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು.ತುರ್ತಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತ ಆಗದಂತೆ ಎಚ್ಚರವಹಿಸುವಂತೆ ಸೂಚಿಸಿದರು.</p>.<p>ನಗರದ ಕಾವೇರಿ ಕೆಳಸೇತುವೆ, ಮಡಿವಾಳ ಕೆಳಸೇತುವೆ ಹಾಗೂ ಲೀಮೆರಿಡಿಯನ್ ಕೆಳಸೇತುವೆಗಳಿಗೂ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ತಾತ್ಕಾಲಿಕ ಕಾಮಗಾರಿಯನ್ನು ವೀಕ್ಷಿಸಿದರು.</p>.<p><strong>ಎಚ್ಚೆತ್ತ ಬೆಸ್ಕಾಂ:</strong> ಕಳೆದ ತಿಂಗಳು 18ರಂದು ಸುರಿದ ಮಳೆಗೆನಗರದ ವಿವಿಧ ಭಾಗಗಳಲ್ಲಿ ಕಂಬಗಳು ನೆಲಕ್ಕೆ ಉರುಳಿದ್ದವು. ಮಂಗಳವಾರವೂ ಸಹಾಯವಾಣಿಗೆ 100ಕ್ಕೂ ಹೆಚ್ಚು ಕರೆಗಳು ಬಂದ ಕಾರಣ ಬೆಸ್ಕಾಂ ಎಚ್ಚೆತ್ತುಕೊಂಡಿದ್ದು, ಹಲವುಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ.</p>.<p>ವಿದ್ಯುತ್ ಕಂಬಗಳಿಗೆ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದ 2,153 ಮರಗಳನ್ನು ಟ್ರಿಮ್ಮಿಂಗ್ ಮಾಡಿದ್ದು, ಬಾಗಿದ್ದ 448 ಕಂಬಗಳನ್ನು ಸದೃಢವಾಗಿನಿಲ್ಲಿಸಲಾಗಿದೆ. 363ಟ್ರಾನ್ಸ್ಫಾರ್ಮರ್ಗಳನ್ನು ದುರಸ್ತಿಪಡಿಸಿದೆ.</p>.<p><strong>ಮಳೆ ಸಾಧ್ಯತೆ ಕಡಿಮೆ</strong><br />‘ಫೋನಿ ಆರ್ಭಟ ಈಗ ತಗ್ಗಿದ್ದು, ನಗರದಲ್ಲಿ ಆ ಚಂಡಮಾರುತದಿಂದ ಇನ್ನು ಮಳೆ ಸಾಧ್ಯತೆ ಇಲ್ಲ’ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಫೋನಿ’ ಚಂಡಮಾರುತ ಹಾಗೂ ಮೇಲ್ಮೈ ಸುಳಿಗಾಳಿ ಪರಿಣಾಮ ಮಂಗಳವಾರ ಸುರಿದ ಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗರುಡಾಚಾರ್ಪಾಳ್ಯದಲ್ಲಿ ಕಾಂಪೌಂಡ್ ಕುಸಿದು ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿದ್ದ,ಪ್ರದೇಶಕ್ಕೆ ಭೇಟಿ ನೀಡಿದರು. ಕಟ್ಟಡದಮಾಲಿಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಬಳಿಕ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟಿರುವ, ಕೆ.ಆರ್.ಪುರ, ಸಿಲ್ಕ್ ಬೋರ್ಡ್ ಜಂಕ್ಷನ್, ಮಡಿವಾಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು.ತುರ್ತಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತ ಆಗದಂತೆ ಎಚ್ಚರವಹಿಸುವಂತೆ ಸೂಚಿಸಿದರು.</p>.<p>ನಗರದ ಕಾವೇರಿ ಕೆಳಸೇತುವೆ, ಮಡಿವಾಳ ಕೆಳಸೇತುವೆ ಹಾಗೂ ಲೀಮೆರಿಡಿಯನ್ ಕೆಳಸೇತುವೆಗಳಿಗೂ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ತಾತ್ಕಾಲಿಕ ಕಾಮಗಾರಿಯನ್ನು ವೀಕ್ಷಿಸಿದರು.</p>.<p><strong>ಎಚ್ಚೆತ್ತ ಬೆಸ್ಕಾಂ:</strong> ಕಳೆದ ತಿಂಗಳು 18ರಂದು ಸುರಿದ ಮಳೆಗೆನಗರದ ವಿವಿಧ ಭಾಗಗಳಲ್ಲಿ ಕಂಬಗಳು ನೆಲಕ್ಕೆ ಉರುಳಿದ್ದವು. ಮಂಗಳವಾರವೂ ಸಹಾಯವಾಣಿಗೆ 100ಕ್ಕೂ ಹೆಚ್ಚು ಕರೆಗಳು ಬಂದ ಕಾರಣ ಬೆಸ್ಕಾಂ ಎಚ್ಚೆತ್ತುಕೊಂಡಿದ್ದು, ಹಲವುಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ.</p>.<p>ವಿದ್ಯುತ್ ಕಂಬಗಳಿಗೆ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದ 2,153 ಮರಗಳನ್ನು ಟ್ರಿಮ್ಮಿಂಗ್ ಮಾಡಿದ್ದು, ಬಾಗಿದ್ದ 448 ಕಂಬಗಳನ್ನು ಸದೃಢವಾಗಿನಿಲ್ಲಿಸಲಾಗಿದೆ. 363ಟ್ರಾನ್ಸ್ಫಾರ್ಮರ್ಗಳನ್ನು ದುರಸ್ತಿಪಡಿಸಿದೆ.</p>.<p><strong>ಮಳೆ ಸಾಧ್ಯತೆ ಕಡಿಮೆ</strong><br />‘ಫೋನಿ ಆರ್ಭಟ ಈಗ ತಗ್ಗಿದ್ದು, ನಗರದಲ್ಲಿ ಆ ಚಂಡಮಾರುತದಿಂದ ಇನ್ನು ಮಳೆ ಸಾಧ್ಯತೆ ಇಲ್ಲ’ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>