<p><strong>ಬೆಂಗಳೂರು</strong>: ಯಲಹಂಕದ ರೇವಾ ವಿಶ್ವವಿದ್ಯಾಲಯದ ಮತದಾನ ಸಾಕ್ಷರತಾ ಸಂಘಟನೆಯು ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದ ಮೊದಲ ಹಂತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.</p>.<p>ಜಾಗೃತಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರವನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಲ್ಲಿ ಶೇ 85ರಷ್ಟು ಮತದಾನವಾಗುತ್ತಿದ್ದು, ಈ ಅಭಿಯಾನದಿಂದ ಶೇ 100ರಷ್ಟು ಮತದಾನ ಆಗುವಂತೆ ಮಾಡುವ ಗುರಿಯಿಂದ 11 ದಿನಗಳ ಕಾಲ 800 ವಿದ್ಯಾರ್ಥಿಗಳು ಮತ್ತು 200 ಸಿಬ್ಬಂದಿ, ಮನೆಮನೆಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೆರವಾಗಿದ್ದರು. ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದ್ದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ‘ಉತ್ತಮ ಸಮಾಜ ನಿರ್ಮಾಣ ಆಗಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿರಬೇಕು. ಎಲ್ಲರೂ ಮತದಾನ ಮಾಡಿದರೆ ಒಳ್ಳೆಯ ಅಭ್ಯರ್ಥಿಆಯ್ಕೆ ಮಾಡಬಹುದು ಎಂದರು.</p>.<p>ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ‘ಇದು ಅಭಿಯಾನದ ಮೊದಲ ಹಂತವಾಗಿದ್ದು, ಅದರ ಭಾಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮನೆಮನೆಗೆ ತೆರಳಿ ಗೂಗಲ್ ಸಹಾಯದಿಂದ ಪ್ರಶ್ನೆಗಳನ್ನು ರೂಪಿಸಿ, 1 ಲಕ್ಷ ನಿವಾಸಿಗಳ ಭೇಟಿ ಮಾಡಿ ವರದಿ ಸಿದ್ದಪಡಿಸಿದ್ದಾರೆ. ಇದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲೇ 2ನೇ ಹಂತದ ಜಾಗೃತಿ ಅಭಿಯಾನ ಆರಂಭವಾಗಲಿದೆ’ ಎಂದರು. ರೇವಾ ವಿವಿ ಕುಲಪತಿ ಡಾ.ಎಸ್.ವೈ.ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕದ ರೇವಾ ವಿಶ್ವವಿದ್ಯಾಲಯದ ಮತದಾನ ಸಾಕ್ಷರತಾ ಸಂಘಟನೆಯು ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದ ಮೊದಲ ಹಂತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.</p>.<p>ಜಾಗೃತಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರವನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಲ್ಲಿ ಶೇ 85ರಷ್ಟು ಮತದಾನವಾಗುತ್ತಿದ್ದು, ಈ ಅಭಿಯಾನದಿಂದ ಶೇ 100ರಷ್ಟು ಮತದಾನ ಆಗುವಂತೆ ಮಾಡುವ ಗುರಿಯಿಂದ 11 ದಿನಗಳ ಕಾಲ 800 ವಿದ್ಯಾರ್ಥಿಗಳು ಮತ್ತು 200 ಸಿಬ್ಬಂದಿ, ಮನೆಮನೆಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೆರವಾಗಿದ್ದರು. ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದ್ದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ‘ಉತ್ತಮ ಸಮಾಜ ನಿರ್ಮಾಣ ಆಗಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿರಬೇಕು. ಎಲ್ಲರೂ ಮತದಾನ ಮಾಡಿದರೆ ಒಳ್ಳೆಯ ಅಭ್ಯರ್ಥಿಆಯ್ಕೆ ಮಾಡಬಹುದು ಎಂದರು.</p>.<p>ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ‘ಇದು ಅಭಿಯಾನದ ಮೊದಲ ಹಂತವಾಗಿದ್ದು, ಅದರ ಭಾಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮನೆಮನೆಗೆ ತೆರಳಿ ಗೂಗಲ್ ಸಹಾಯದಿಂದ ಪ್ರಶ್ನೆಗಳನ್ನು ರೂಪಿಸಿ, 1 ಲಕ್ಷ ನಿವಾಸಿಗಳ ಭೇಟಿ ಮಾಡಿ ವರದಿ ಸಿದ್ದಪಡಿಸಿದ್ದಾರೆ. ಇದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲೇ 2ನೇ ಹಂತದ ಜಾಗೃತಿ ಅಭಿಯಾನ ಆರಂಭವಾಗಲಿದೆ’ ಎಂದರು. ರೇವಾ ವಿವಿ ಕುಲಪತಿ ಡಾ.ಎಸ್.ವೈ.ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>