<p>ಆಯುಷ್ ವೈದ್ಯರಿಗೆ ಅಲೋಪಥಿ ಔಷಧಿಗಳನ್ನು ನೀಡಲು ಅನುಮತಿ ನೀಡಬೇಕೋ, ಬೇಡವೋ ಎಂದು ಪರಿಶೀಲನೆ ನಡೆಸಿ ವರದಿ ನೀಡುವ ಸಂಬಂಧ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.<br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮಿತಿಯನ್ನು ರಚಿಸಿ, ಆಯುಷ್ ವೈದ್ಯರ ಬೇಡಿಕೆಗಳ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಬಹುಶಃ 20 ದಿನಗಳ ಒಳಗೆ ವರದಿ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ನಿರ್ದೇಶಕರು, ಆಯುಷ್ ಇಲಾಖೆ ನಿರ್ದೇಶಕರು, ಕಾನೂನು ಇಲಾಖೆಯ ಕಾರ್ಯದರ್ಶಿ, ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳು ಸಮಿತಿಯಲ್ಲಿದ್ದಾರೆ.<br /> <br /> ಸುಮಾರು 12 ರಾಜ್ಯಗಳಲ್ಲಿ ಆಯುಷ್ ವೈದ್ಯರಿಗೆ ಅಲೋಪತಿ ಔಷಧಿ ನೀಡಲು ಅವಕಾಶ ನೀಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಅವಕಾಶ ನೀಡಬೇಕು ಎಂದು ಆಯುಷ್ ವೈದ್ಯರ ನಿಯೋಗವು ಗುರುವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಅವರ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿದೆ.<br /> <br /> ಡ್ರಗ್ಸ್ ಅಂಡ್ ಕಾಸ್ಮೆಟಿಕ್ ನಿಯಮಗಳ ಪ್ರಕಾರ, ಆಯುಷ್ ವೈದ್ಯರಿಗೆ ಅಲೋಪತಿ ಔಷಧಿ ನೀಡಲು ಅವಕಾಶ ಇದೆ ಎಂಬುದು ಆಯುಷ್ ವೈದ್ಯರ ವಾದ. ಇದು ತುಂಬಾ ಸೂಕ್ಷ್ಮವಾದ ವಿಚಾರ. ಸಮಿತಿ ನೀಡುವ ವರದಿಯನ್ನು ಆಧರಿಸಿ ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.<br /> <br /> ಆಯುರ್ವೇದ, ಯುನಾನಿ, ಹೋಮಿಯೋಪಥಿ ಇತ್ಯಾದಿ ವಿಷಯಗಳಲ್ಲಿ ಪದವಿ ಪಡೆದು ನೋಂದಣಿ ಮಾಡಿಸಿಕೊಂಡಿರುವ ವೈದ್ಯರಿಗೆ ಮಾತ್ರ ಭಾರತೀಯ ವೈದ್ಯಪದ್ಧತಿಯ ಔಷಧ ನೀಡಲು ಅವಕಾಶ ಇದೆ.<br /> <br /> ಇಲಾಖೆಯ ನಿಯಮಾವಳಿಗಳ ಪ್ರಕಾರ ಅವರನ್ನು (ನಾಟಿ ವೈದ್ಯರು) ನಕಲಿ ವೈದ್ಯರು ಎಂದೇ ಪರಿಗಣಿಸಲಾಗುತ್ತದೆ. ಅಂತಹವರು ಚಿಕಿತ್ಸೆ ನೀಡುತ್ತಿರುವುದು ಕಂಡುಬಂದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ, ಅಂತಹವರ ವಿರುದ್ಧ ಮೊಕದ್ದಮೆ ದಾಖಲಿಸಲಿದೆ ಎಂದರು.<br /> <br /> ನೋಂದಣಿ ಮಾಡಿಸದೆ ಚಿಕಿತ್ಸೆ ನೀಡಿದರೆ ಇಲಾಖೆಯ ದೃಷ್ಟಿಯಲ್ಲಿ ಅವರು ನಕಲಿ ವೈದ್ಯರಾಗುತ್ತಾರೆ. ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಕರ್ನಾಟಕ ಆಯುರ್ವೇದ, ಯುನಾನಿ ವೈದ್ಯ ನೋಂದಣಿ ಮಂಡಳಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಇದೆ ಎಂದು ಅವರು ನುಡಿದರು.<br /> <br /> ನಾಟಿ ವೈದ್ಯರಿಗೆ ನೋಂದಣಿ ಮಾಡಿಸಲು ಎಲ್ಲಿಯೂ ಅವಕಾಶ ಇಲ್ಲ. ಪಾರಂಪರಿಕವಾಗಿ ಗಿಡಮೂಲಿಕೆಗಳಿಂದ ಔಷಧ ತಯಾರಿಸಿ ಕೊಡುವಂತಹವರಿಗೆ ಸುಮಾರು ಒಂದೂವರೆ ವರ್ಷ ತರಬೇತಿ ನೀಡಿ ಅವರನ್ನು ಪ್ಯಾರಾ ಮೆಡಿಕಲ್ ಸಿಬ್ಬಂದಿ ಎಂದು ಪರಿಗಣಿಸುವ ಪದ್ಧತಿ ಆಂಧ್ರಪ್ರದೇಶದಲ್ಲಿ ಇದೆ. ಆದರೆ ಅವರನ್ನು `ವೈದ್ಯ~ ಎಂದು ಕರೆಯುವಂತಿಲ್ಲ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಯುಷ್ ವೈದ್ಯರಿಗೆ ಅಲೋಪಥಿ ಔಷಧಿಗಳನ್ನು ನೀಡಲು ಅನುಮತಿ ನೀಡಬೇಕೋ, ಬೇಡವೋ ಎಂದು ಪರಿಶೀಲನೆ ನಡೆಸಿ ವರದಿ ನೀಡುವ ಸಂಬಂಧ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.<br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮಿತಿಯನ್ನು ರಚಿಸಿ, ಆಯುಷ್ ವೈದ್ಯರ ಬೇಡಿಕೆಗಳ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಬಹುಶಃ 20 ದಿನಗಳ ಒಳಗೆ ವರದಿ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ನಿರ್ದೇಶಕರು, ಆಯುಷ್ ಇಲಾಖೆ ನಿರ್ದೇಶಕರು, ಕಾನೂನು ಇಲಾಖೆಯ ಕಾರ್ಯದರ್ಶಿ, ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳು ಸಮಿತಿಯಲ್ಲಿದ್ದಾರೆ.<br /> <br /> ಸುಮಾರು 12 ರಾಜ್ಯಗಳಲ್ಲಿ ಆಯುಷ್ ವೈದ್ಯರಿಗೆ ಅಲೋಪತಿ ಔಷಧಿ ನೀಡಲು ಅವಕಾಶ ನೀಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಅವಕಾಶ ನೀಡಬೇಕು ಎಂದು ಆಯುಷ್ ವೈದ್ಯರ ನಿಯೋಗವು ಗುರುವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಅವರ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿದೆ.<br /> <br /> ಡ್ರಗ್ಸ್ ಅಂಡ್ ಕಾಸ್ಮೆಟಿಕ್ ನಿಯಮಗಳ ಪ್ರಕಾರ, ಆಯುಷ್ ವೈದ್ಯರಿಗೆ ಅಲೋಪತಿ ಔಷಧಿ ನೀಡಲು ಅವಕಾಶ ಇದೆ ಎಂಬುದು ಆಯುಷ್ ವೈದ್ಯರ ವಾದ. ಇದು ತುಂಬಾ ಸೂಕ್ಷ್ಮವಾದ ವಿಚಾರ. ಸಮಿತಿ ನೀಡುವ ವರದಿಯನ್ನು ಆಧರಿಸಿ ಸರ್ಕಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.<br /> <br /> ಆಯುರ್ವೇದ, ಯುನಾನಿ, ಹೋಮಿಯೋಪಥಿ ಇತ್ಯಾದಿ ವಿಷಯಗಳಲ್ಲಿ ಪದವಿ ಪಡೆದು ನೋಂದಣಿ ಮಾಡಿಸಿಕೊಂಡಿರುವ ವೈದ್ಯರಿಗೆ ಮಾತ್ರ ಭಾರತೀಯ ವೈದ್ಯಪದ್ಧತಿಯ ಔಷಧ ನೀಡಲು ಅವಕಾಶ ಇದೆ.<br /> <br /> ಇಲಾಖೆಯ ನಿಯಮಾವಳಿಗಳ ಪ್ರಕಾರ ಅವರನ್ನು (ನಾಟಿ ವೈದ್ಯರು) ನಕಲಿ ವೈದ್ಯರು ಎಂದೇ ಪರಿಗಣಿಸಲಾಗುತ್ತದೆ. ಅಂತಹವರು ಚಿಕಿತ್ಸೆ ನೀಡುತ್ತಿರುವುದು ಕಂಡುಬಂದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ, ಅಂತಹವರ ವಿರುದ್ಧ ಮೊಕದ್ದಮೆ ದಾಖಲಿಸಲಿದೆ ಎಂದರು.<br /> <br /> ನೋಂದಣಿ ಮಾಡಿಸದೆ ಚಿಕಿತ್ಸೆ ನೀಡಿದರೆ ಇಲಾಖೆಯ ದೃಷ್ಟಿಯಲ್ಲಿ ಅವರು ನಕಲಿ ವೈದ್ಯರಾಗುತ್ತಾರೆ. ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಕರ್ನಾಟಕ ಆಯುರ್ವೇದ, ಯುನಾನಿ ವೈದ್ಯ ನೋಂದಣಿ ಮಂಡಳಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಇದೆ ಎಂದು ಅವರು ನುಡಿದರು.<br /> <br /> ನಾಟಿ ವೈದ್ಯರಿಗೆ ನೋಂದಣಿ ಮಾಡಿಸಲು ಎಲ್ಲಿಯೂ ಅವಕಾಶ ಇಲ್ಲ. ಪಾರಂಪರಿಕವಾಗಿ ಗಿಡಮೂಲಿಕೆಗಳಿಂದ ಔಷಧ ತಯಾರಿಸಿ ಕೊಡುವಂತಹವರಿಗೆ ಸುಮಾರು ಒಂದೂವರೆ ವರ್ಷ ತರಬೇತಿ ನೀಡಿ ಅವರನ್ನು ಪ್ಯಾರಾ ಮೆಡಿಕಲ್ ಸಿಬ್ಬಂದಿ ಎಂದು ಪರಿಗಣಿಸುವ ಪದ್ಧತಿ ಆಂಧ್ರಪ್ರದೇಶದಲ್ಲಿ ಇದೆ. ಆದರೆ ಅವರನ್ನು `ವೈದ್ಯ~ ಎಂದು ಕರೆಯುವಂತಿಲ್ಲ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>