ಕರ್ನಾಟಕ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ 'ಪ್ರಸೂತಿ ಆರೈಕೆ' ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಬಿಪಿಎಲ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಗರ್ಭಿಣಿಯರಿಗೆ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡರೆ ಸಾಮಾನ್ಯ ವರ್ಗದ ಮಹಿಳೆಯರಿಗೆ ₹2,000 ಹಾಗೂ ಎಸ್ಸಿ, ಎಸ್ಟಿ ವರ್ಗದ ಮಹಿಳೆಯರಿಗೆ ₹3000 ನೀಡಲಾಗುತ್ತದೆ.
ಉದ್ದೇಶವೇನು?
ಈ ಯೋಜನೆಯ ಹಿಂದಿನ ಮುಖ್ಯ ಉದ್ದೇಶವೆಂದರೆ, ಮಹಿಳೆಯರಿಗೆ ತಮ್ಮ ಪ್ರಸವದ ನಂತರದ ವೆಚ್ಚಗಳನ್ನು ನೋಡಿಕೊಳ್ಳಲು ಹಣಕಾಸಿನ ನೆರವು ನೀಡುವುದಾಗಿದೆ.