<p>ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯೂ ಒಂದಾಗಿದೆ. ಈ ಯೋಜನೆ ಮೂಲಕ ಎಲ್ಪಿಜಿ ಸಿಲಿಂಡರ್ಗಳ ಸಂಪರ್ಕವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು 2016ರಲ್ಲಿ ಪ್ರಾರಂಭ ಮಾಡಲಾಯಿತು.</p><p>ಪ್ರಸ್ತುತ ಪಿಎಂ ಉಜ್ವಲ ಯೋಜನೆಯಡಿ 25 ಲಕ್ಷ ಹೊಸ ಸಿಲಿಂಡರ್ ಸಂಪರ್ಕ ಒದಗಿಸಲು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಗೆ ₹676 ಕೋಟಿಯನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಪ್ರತಿ ಸಿಲಿಂಡರ್ ಬಳಕೆದಾರರಿಗೆ ₹300 ಗಳ ಅನುದಾನವನ್ನು ನೀಡಲಾಗುತ್ತದೆ. </p><p><strong>ಏನೆಲ್ಲಾ ಸೌಲಭ್ಯ ದೊರೆಯಲಿದೆ?</strong> </p><p>ಪಿಎಂ ಉಜ್ವಲ ಯೋಜನೆಯಲ್ಲಿ ಫಲಾನುಭವಿಗಲಿಗೆ ಸಿಲಿಂಡರ್, ಅನಿಲ ಒತ್ತಡ ನಿಯಂತ್ರಕ, ಸುರಕ್ಷಾ ಮೃದು ಕೊಳವೆ ಹಾಗೂ ಸ್ಟೌವ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಫಲಾನುಭವಿಗಳಿಗೆ ಮೊದಲ ಸಿಲಿಂಡರ್ ಹಾಗೂ ಸ್ಟೌವ್ಗೆ ಯಾವುದೇ ಶುಲ್ಕವನ್ನು ಪಾವತಿ ಮಾಡುವ ಹಾಗಿಲ್ಲ. ಇದರ ವೆಚ್ಚವನ್ನು ಸರ್ಕಾರವೆ ಭರಿಸುತ್ತದೆ.</p>.PM Kisan Samman Nidhi: ರೈತರು ವಾರ್ಷಿಕ ₹6000 ಪಡೆಯುವುದು ಹೇಗೆ?. <p><strong>ಯೋಜನೆ ಪಡೆಯಲು ಇರಬೇಕಾದ ಅರ್ಹತೆಗಳೇನು?</strong></p><ul><li><p>ಬಡ ಕುಟುಂಬಕ್ಕೆ ಸೇರಿದ ಮತ್ತು ಮನೆಯಲ್ಲಿ ಎಲ್ಪಿಜಿ ಸಂಪರ್ಕ ಹೊಂದಿರದ ವಯಸ್ಕ ಮಹಿಳೆ ಅರ್ಹರಾಗಿರುತ್ತಾರೆ.</p></li><li><p>ಎಸ್ಇಸಿಸಿ 2011 ಪಟ್ಟಿಯ ಪ್ರಕಾರ ಅರ್ಹರಾಗಿರಬೇಕು. </p></li><li><p>ಎಸ್ಸಿ, ಎಸ್ಟಿ ಕುಟುಂಬಗಳಿಗೆ ಸೇರಿದವರಾಗಿರಬೇಕು.</p></li><li><p>ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY),</p></li><li><p>ಅಂತ್ಯೋದಯ ಅನ್ನ ಯೋಜನೆ (AAY),</p></li><li><p>ಅರಣ್ಯವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳು (MBC)</p></li><li><p>ಬುಡಕಟ್ಟು ಜನಾಂಗದವರು, ನದಿ ದ್ವೀಪಗಳಲ್ಲಿ ವಾಸಿಸುವ ಜನರು ಅರ್ಹರಾಗಿರುತ್ತಾರೆ<strong>. </strong></p></li></ul><p><strong>ಅಗತ್ಯ ದಾಖಲೆಗಳು ಯಾವುವು?</strong> </p><ul><li><p>ಆಧಾರ್ ಕಾರ್ಡ್</p></li><li><p>ಪಡಿತರ ಚೀಟಿ</p></li><li><p>ವಿಳಾಸ ಪುರಾವೆ</p></li><li><p>ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ</p></li><li><p>ಬ್ಯಾಂಕ್ ವಿವರಗಳು</p></li></ul>.ಕಿಸಾನ್ ವಿಕಾಸ್ ಪತ್ರ ಯೋಜನೆಯಲ್ಲಿ ಸಿಗಲಿದೆ ಹೆಚ್ಚು ಬಡ್ಡಿ: ಹೂಡಿಕೆ ಹೇಗೆ? .<p><strong>ಅರ್ಜಿಯನ್ನು ಸಲ್ಲಿಸುವುದು ಹೇಗೆ?</strong> </p><ul><li><p>ಅರ್ಜಿಯನ್ನು ಆನ್ಲೈನ್ ಮೂಲಕ ಯೋಜನೆಯ ಅಧಿಕೃತ ಅಂತರ್ಜಾಲ ತಾಣ https://www.pmuy.gov.in/e-kyc.html ಭೇಟಿ ನೀಡಿ.</p></li><li><p>ಇಂಡೇನ್, ಭಾರತ್ ಗ್ಯಾಸ್, ಎಚ್ಪಿ ಗ್ಯಾಸ್ ತೈಲ ಕಂಪನಿ ಹೆಸರನ್ನು ಆಯ್ಕೆ ಮಾಡಿ.</p></li><li><p>ಸಂಪರ್ಕದ ಪ್ರಕಾರವನ್ನು ಆಯ್ಕೆಮಾಡಿ.</p></li><li><p>ರಾಜ್ಯ, ಜಿಲ್ಲೆ ಮತ್ತು ವಿತರಕರ ಹೆಸರನ್ನು ಆರಿಸಿ.</p></li><li><p>ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ.</p></li><li><p>ವಲಸೆ ಕುಟುಂಬದವರಾಗಿದ್ದರೆ, ಹೌದು ಅಥವಾ ಇಲ್ಲ ಆಯ್ಕೆ ಮಾಡಿ.</p></li><li><p>ರೇಷನ್ ಕಾರ್ಡ್ ಮಾಹಿತಿಯನ್ನು ಭರ್ತಿ ಮಾಡಿ</p></li><li><p>ವರ್ಗವನ್ನು ಆಯ್ಕೆ ಮಾಡಿ.</p></li><li><p>ಕುಟುಂಬದ ವಿವರ, ವೈಯಕ್ತಿಕ ವಿವರ, ವಿಳಾಸ ಹಾಗೂ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ. ಗ್ರಾಮೀಣ ಅಥವಾ ನಗರವನ್ನು ಆಯ್ಕೆ ಮಾಡಿ ಅರ್ಜಿಯನ್ನು ಸಲ್ಲಿಸಿ.</p></li><li><p>ಉಲ್ಲೇಖ ಸಂಖ್ಯೆಯನ್ನು ಪಡೆದುಕೊಂಡು ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯೂ ಒಂದಾಗಿದೆ. ಈ ಯೋಜನೆ ಮೂಲಕ ಎಲ್ಪಿಜಿ ಸಿಲಿಂಡರ್ಗಳ ಸಂಪರ್ಕವನ್ನು ಒದಗಿಸಲಾಗುತ್ತದೆ. ಈ ಯೋಜನೆಯನ್ನು 2016ರಲ್ಲಿ ಪ್ರಾರಂಭ ಮಾಡಲಾಯಿತು.</p><p>ಪ್ರಸ್ತುತ ಪಿಎಂ ಉಜ್ವಲ ಯೋಜನೆಯಡಿ 25 ಲಕ್ಷ ಹೊಸ ಸಿಲಿಂಡರ್ ಸಂಪರ್ಕ ಒದಗಿಸಲು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಗೆ ₹676 ಕೋಟಿಯನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಪ್ರತಿ ಸಿಲಿಂಡರ್ ಬಳಕೆದಾರರಿಗೆ ₹300 ಗಳ ಅನುದಾನವನ್ನು ನೀಡಲಾಗುತ್ತದೆ. </p><p><strong>ಏನೆಲ್ಲಾ ಸೌಲಭ್ಯ ದೊರೆಯಲಿದೆ?</strong> </p><p>ಪಿಎಂ ಉಜ್ವಲ ಯೋಜನೆಯಲ್ಲಿ ಫಲಾನುಭವಿಗಲಿಗೆ ಸಿಲಿಂಡರ್, ಅನಿಲ ಒತ್ತಡ ನಿಯಂತ್ರಕ, ಸುರಕ್ಷಾ ಮೃದು ಕೊಳವೆ ಹಾಗೂ ಸ್ಟೌವ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಫಲಾನುಭವಿಗಳಿಗೆ ಮೊದಲ ಸಿಲಿಂಡರ್ ಹಾಗೂ ಸ್ಟೌವ್ಗೆ ಯಾವುದೇ ಶುಲ್ಕವನ್ನು ಪಾವತಿ ಮಾಡುವ ಹಾಗಿಲ್ಲ. ಇದರ ವೆಚ್ಚವನ್ನು ಸರ್ಕಾರವೆ ಭರಿಸುತ್ತದೆ.</p>.PM Kisan Samman Nidhi: ರೈತರು ವಾರ್ಷಿಕ ₹6000 ಪಡೆಯುವುದು ಹೇಗೆ?. <p><strong>ಯೋಜನೆ ಪಡೆಯಲು ಇರಬೇಕಾದ ಅರ್ಹತೆಗಳೇನು?</strong></p><ul><li><p>ಬಡ ಕುಟುಂಬಕ್ಕೆ ಸೇರಿದ ಮತ್ತು ಮನೆಯಲ್ಲಿ ಎಲ್ಪಿಜಿ ಸಂಪರ್ಕ ಹೊಂದಿರದ ವಯಸ್ಕ ಮಹಿಳೆ ಅರ್ಹರಾಗಿರುತ್ತಾರೆ.</p></li><li><p>ಎಸ್ಇಸಿಸಿ 2011 ಪಟ್ಟಿಯ ಪ್ರಕಾರ ಅರ್ಹರಾಗಿರಬೇಕು. </p></li><li><p>ಎಸ್ಸಿ, ಎಸ್ಟಿ ಕುಟುಂಬಗಳಿಗೆ ಸೇರಿದವರಾಗಿರಬೇಕು.</p></li><li><p>ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY),</p></li><li><p>ಅಂತ್ಯೋದಯ ಅನ್ನ ಯೋಜನೆ (AAY),</p></li><li><p>ಅರಣ್ಯವಾಸಿಗಳು, ಅತ್ಯಂತ ಹಿಂದುಳಿದ ವರ್ಗಗಳು (MBC)</p></li><li><p>ಬುಡಕಟ್ಟು ಜನಾಂಗದವರು, ನದಿ ದ್ವೀಪಗಳಲ್ಲಿ ವಾಸಿಸುವ ಜನರು ಅರ್ಹರಾಗಿರುತ್ತಾರೆ<strong>. </strong></p></li></ul><p><strong>ಅಗತ್ಯ ದಾಖಲೆಗಳು ಯಾವುವು?</strong> </p><ul><li><p>ಆಧಾರ್ ಕಾರ್ಡ್</p></li><li><p>ಪಡಿತರ ಚೀಟಿ</p></li><li><p>ವಿಳಾಸ ಪುರಾವೆ</p></li><li><p>ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ</p></li><li><p>ಬ್ಯಾಂಕ್ ವಿವರಗಳು</p></li></ul>.ಕಿಸಾನ್ ವಿಕಾಸ್ ಪತ್ರ ಯೋಜನೆಯಲ್ಲಿ ಸಿಗಲಿದೆ ಹೆಚ್ಚು ಬಡ್ಡಿ: ಹೂಡಿಕೆ ಹೇಗೆ? .<p><strong>ಅರ್ಜಿಯನ್ನು ಸಲ್ಲಿಸುವುದು ಹೇಗೆ?</strong> </p><ul><li><p>ಅರ್ಜಿಯನ್ನು ಆನ್ಲೈನ್ ಮೂಲಕ ಯೋಜನೆಯ ಅಧಿಕೃತ ಅಂತರ್ಜಾಲ ತಾಣ https://www.pmuy.gov.in/e-kyc.html ಭೇಟಿ ನೀಡಿ.</p></li><li><p>ಇಂಡೇನ್, ಭಾರತ್ ಗ್ಯಾಸ್, ಎಚ್ಪಿ ಗ್ಯಾಸ್ ತೈಲ ಕಂಪನಿ ಹೆಸರನ್ನು ಆಯ್ಕೆ ಮಾಡಿ.</p></li><li><p>ಸಂಪರ್ಕದ ಪ್ರಕಾರವನ್ನು ಆಯ್ಕೆಮಾಡಿ.</p></li><li><p>ರಾಜ್ಯ, ಜಿಲ್ಲೆ ಮತ್ತು ವಿತರಕರ ಹೆಸರನ್ನು ಆರಿಸಿ.</p></li><li><p>ಮೊಬೈಲ್ ಸಂಖ್ಯೆ ಹಾಗೂ ಒಟಿಪಿ ನಮೂದಿಸಿ.</p></li><li><p>ವಲಸೆ ಕುಟುಂಬದವರಾಗಿದ್ದರೆ, ಹೌದು ಅಥವಾ ಇಲ್ಲ ಆಯ್ಕೆ ಮಾಡಿ.</p></li><li><p>ರೇಷನ್ ಕಾರ್ಡ್ ಮಾಹಿತಿಯನ್ನು ಭರ್ತಿ ಮಾಡಿ</p></li><li><p>ವರ್ಗವನ್ನು ಆಯ್ಕೆ ಮಾಡಿ.</p></li><li><p>ಕುಟುಂಬದ ವಿವರ, ವೈಯಕ್ತಿಕ ವಿವರ, ವಿಳಾಸ ಹಾಗೂ ಬ್ಯಾಂಕ್ ವಿವರಗಳನ್ನು ಭರ್ತಿ ಮಾಡಿ. ಗ್ರಾಮೀಣ ಅಥವಾ ನಗರವನ್ನು ಆಯ್ಕೆ ಮಾಡಿ ಅರ್ಜಿಯನ್ನು ಸಲ್ಲಿಸಿ.</p></li><li><p>ಉಲ್ಲೇಖ ಸಂಖ್ಯೆಯನ್ನು ಪಡೆದುಕೊಂಡು ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>