<p>ರಾಜ್ಯ ಸರ್ಕಾರ ರೈತ ಮಕ್ಕಳಿಗಾಗಿ ರೂಪಿಸಿರುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಲಾಗಿದೆ. ಈ ಯೋಜನೆಯಡಿ ರಾಜ್ಯದ ಎಲ್ಲಾ ರೈತ ಮಕ್ಕಳು ಅರ್ಹತೆಯ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದು.</p><p>ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇರಬೇಕಾದ ಅರ್ಹತೆಗಳೇನು? ಎಂಬ ಮಾಹಿತಿಯನ್ನು ತಿಳಿಯೋಣ.</p><p><strong>ಯಾರು ಅರ್ಜಿ ಸಲ್ಲಿಸಬಹುದು?</strong></p><p>ರಾಜ್ಯದಲ್ಲಿರುವ ಎಲ್ಲಾ ರೈತ ಮಕ್ಕಳು ಈ ಯೋಜನೆಯನ್ನು ಪಡೆಯಲು ಅರ್ಹರಾಗಿರುತ್ತಾರೆ.</p><ul><li><p>ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು</p></li><li><p>ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳು</p></li><li><p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. </p></li></ul>.<p><strong>ಅಗತ್ಯ ದಾಖಲಾತಿಗಳೇನು?</strong></p><ul><li><p>ಶಾಲೆ ಅಥವಾ ಕಾಲೇಜುಗಳ ಪ್ರಮಾಣಪತ್ರ</p></li><li><p>ಕುಟುಂಬದ ಆದಾಯ ಪ್ರಮಾಣ ಪತ್ರ ಮತ್ತು ಹಿನ್ನೆಲೆ ಪರಿಶೀಲನೆ</p></li><li><p>ವಿದ್ಯಾರ್ಥಿಯ ಪೋಷಕರು ರೈತರಾಗಿರುವುದನ್ನು ಖಚಿತಪಡಿಸಿಕೊಳ್ಳುವುದು</p></li><li><p>ಪೋಷಕರ ಹೆಸರಿನಲ್ಲಿ ಕೃಷಿಭೂಮಿ ಇರುವುದರ ಪರಿಶೀಲನೆ</p></li><li><p> 'fruits' ಪೋರ್ಟಲ್ ಪರಿಶೀಲನೆ</p></li><li><p>ರೈತರ (farmer ID) ಪರಿಶೀಲನೆ</p></li><li><p>ಭೂಮಿ ವಿವರಗಳನ್ನು 'fruits' ಡೇಟಾಬೇಸ್ಗೆ ಹೊಂದಾಣಿಕೆ</p></li></ul><p><strong>ಅನುಮೋದನೆ ಹೇಗೆ? </strong></p><p>ಮೇಲಿನ ಎಲ್ಲಾ ಮಾನದಂಡಗಳನ್ನು ಪೂರೈಸಿದ ಬಳಿಕ ಅರ್ಜಿಯನ್ನು ಅನುಮೋದನೆಗೊಳಿಸಲಾಗುತ್ತದೆ. ಬಳಿಕ ವಿದ್ಯಾರ್ಥಿ ನಿಧಿಯ ಮೊತ್ತ ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ. </p>.<p><a href="https://ssp.postmatric.karnataka.gov.in/" rel="nofollow">https://ssp.postmatric.karnataka.gov.in</a>ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅಲ್ಲಿ ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ತರಗತಿಯನ್ನು ಆಯ್ಕೆ ಮಾಡಿರಿ. ಬಳಿಕ ಖಾತೆಯನ್ನು ರಚಿಸಿ. ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ ಸರ್ಕಾರ ರೈತ ಮಕ್ಕಳಿಗಾಗಿ ರೂಪಿಸಿರುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಲಾಗಿದೆ. ಈ ಯೋಜನೆಯಡಿ ರಾಜ್ಯದ ಎಲ್ಲಾ ರೈತ ಮಕ್ಕಳು ಅರ್ಹತೆಯ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದು.</p><p>ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇರಬೇಕಾದ ಅರ್ಹತೆಗಳೇನು? ಎಂಬ ಮಾಹಿತಿಯನ್ನು ತಿಳಿಯೋಣ.</p><p><strong>ಯಾರು ಅರ್ಜಿ ಸಲ್ಲಿಸಬಹುದು?</strong></p><p>ರಾಜ್ಯದಲ್ಲಿರುವ ಎಲ್ಲಾ ರೈತ ಮಕ್ಕಳು ಈ ಯೋಜನೆಯನ್ನು ಪಡೆಯಲು ಅರ್ಹರಾಗಿರುತ್ತಾರೆ.</p><ul><li><p>ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು</p></li><li><p>ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳು</p></li><li><p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. </p></li></ul>.<p><strong>ಅಗತ್ಯ ದಾಖಲಾತಿಗಳೇನು?</strong></p><ul><li><p>ಶಾಲೆ ಅಥವಾ ಕಾಲೇಜುಗಳ ಪ್ರಮಾಣಪತ್ರ</p></li><li><p>ಕುಟುಂಬದ ಆದಾಯ ಪ್ರಮಾಣ ಪತ್ರ ಮತ್ತು ಹಿನ್ನೆಲೆ ಪರಿಶೀಲನೆ</p></li><li><p>ವಿದ್ಯಾರ್ಥಿಯ ಪೋಷಕರು ರೈತರಾಗಿರುವುದನ್ನು ಖಚಿತಪಡಿಸಿಕೊಳ್ಳುವುದು</p></li><li><p>ಪೋಷಕರ ಹೆಸರಿನಲ್ಲಿ ಕೃಷಿಭೂಮಿ ಇರುವುದರ ಪರಿಶೀಲನೆ</p></li><li><p> 'fruits' ಪೋರ್ಟಲ್ ಪರಿಶೀಲನೆ</p></li><li><p>ರೈತರ (farmer ID) ಪರಿಶೀಲನೆ</p></li><li><p>ಭೂಮಿ ವಿವರಗಳನ್ನು 'fruits' ಡೇಟಾಬೇಸ್ಗೆ ಹೊಂದಾಣಿಕೆ</p></li></ul><p><strong>ಅನುಮೋದನೆ ಹೇಗೆ? </strong></p><p>ಮೇಲಿನ ಎಲ್ಲಾ ಮಾನದಂಡಗಳನ್ನು ಪೂರೈಸಿದ ಬಳಿಕ ಅರ್ಜಿಯನ್ನು ಅನುಮೋದನೆಗೊಳಿಸಲಾಗುತ್ತದೆ. ಬಳಿಕ ವಿದ್ಯಾರ್ಥಿ ನಿಧಿಯ ಮೊತ್ತ ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ. </p>.<p><a href="https://ssp.postmatric.karnataka.gov.in/" rel="nofollow">https://ssp.postmatric.karnataka.gov.in</a>ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅಲ್ಲಿ ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ತರಗತಿಯನ್ನು ಆಯ್ಕೆ ಮಾಡಿರಿ. ಬಳಿಕ ಖಾತೆಯನ್ನು ರಚಿಸಿ. ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>