ಮಾರುಕಟ್ಟೆ ಅಭಿವೃದ್ಧಿ ಮಾಡಿ ವ್ಯಾಪಾರಿಗಳಿಗೆ, ರೈತರಿಗೆ ಅನುಕೂಲ ಮಾಡಿಕೊಡಿ ಎಂದು ಕೇಳುತ್ತಿದ್ದೇವೆ. ಆದರೆ ಜನರ ಮುಂದೆಯೇ ನನ್ನ ಮೂಗಿಗೆ ತುಪ್ಪ ಹಚ್ಚಿ ಹೋಗುತ್ತಿದ್ದಾರೆಯೇ ವಿನಾ ಕೆಲಸ ಮಾಡುತ್ತಿಲ್ಲ. ದೂರದ ಮೈಸೂರಿನವರಿಗೆ ಈ ಜಿಲ್ಲೆಯ ಉಸ್ತುವಾರಿ ಕೊಡಬೇಡಿ ಎಂದು ಆರಂಭದಲ್ಲೇ ಜನರು ವಿರೋಧ ಮಾಡಿದ್ದರು. ಸರ್ಕಾರ ಜನರ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದು ಅಳಲು ಹೇಳಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.