<p><strong>ಬೆಂಗಳೂರು:</strong> ಪ್ರಶಸ್ತಿ ವಿಜೇತ ‘ಕ್ವೀನ್ ಲತೀಫಾ’ ರೇಸ್ ಕುದುರೆಗೆ ಉದ್ದೀಪನ ಮದ್ದು ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>‘ಈ ಪ್ರಕರಣದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಸಿಐಡಿ ಪೊಲೀಸರು ತಮ್ಮ ತನಿಖೆ ಪೂರ್ಣಗೊಳಿಸಿ ವರದಿ ನೀಡಲಿ’ ಎಂದು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ನಮ್ಮ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು. ಈಗ ನಡೆಸುತ್ತಿರುವ ತನಿಖೆಗೆ ತಡೆ ನೀಡಬೇಕು’ ಎಂದು ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಯೂ ಆದ ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘದ ಸದಸ್ಯ ಎಚ್.ಚಂದ್ರೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p>‘ಕ್ವೀನ್ ಲತೀಫಾಗೆ ಕೆಟಗರಿ–3 ಮದ್ದು ನೀಡಿದ್ದರಿಂದಲೇ ನಿರ್ದಿಷ್ಟ ರೇಸ್ನಲ್ಲಿ ಗೆದ್ದಿದೆ’ ಎಂದು ಆರೋಪಿಸಿ ಚಂದ್ರೇಗೌಡ 2017ರ ಏಪ್ರಿಲ್ ಮೂರನೇ ವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಶಸ್ತಿ ವಿಜೇತ ‘ಕ್ವೀನ್ ಲತೀಫಾ’ ರೇಸ್ ಕುದುರೆಗೆ ಉದ್ದೀಪನ ಮದ್ದು ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>‘ಈ ಪ್ರಕರಣದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಸಿಐಡಿ ಪೊಲೀಸರು ತಮ್ಮ ತನಿಖೆ ಪೂರ್ಣಗೊಳಿಸಿ ವರದಿ ನೀಡಲಿ’ ಎಂದು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>‘ನಮ್ಮ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು. ಈಗ ನಡೆಸುತ್ತಿರುವ ತನಿಖೆಗೆ ತಡೆ ನೀಡಬೇಕು’ ಎಂದು ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಯೂ ಆದ ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘದ ಸದಸ್ಯ ಎಚ್.ಚಂದ್ರೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p>‘ಕ್ವೀನ್ ಲತೀಫಾಗೆ ಕೆಟಗರಿ–3 ಮದ್ದು ನೀಡಿದ್ದರಿಂದಲೇ ನಿರ್ದಿಷ್ಟ ರೇಸ್ನಲ್ಲಿ ಗೆದ್ದಿದೆ’ ಎಂದು ಆರೋಪಿಸಿ ಚಂದ್ರೇಗೌಡ 2017ರ ಏಪ್ರಿಲ್ ಮೂರನೇ ವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>