ನವದೆಹಲಿ: ಇಂಗ್ಲೆಂಡ್ನ ಹಿರಿಯ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಕೊರೊನಾ ಸೋಂಕು ಕುರಿತು ಭಾರತದಲ್ಲಿ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ‘ಪ್ರತ್ಯೇಕವಾಸ’ದ ಕುರಿತು ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪಾಲಿಸುವಂತೆ ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಸಹ ಆಟಗಾರನಾಗಿದ್ದ ಶ್ರೀವತ್ಸ ಗೋಸ್ವಾಮಿ ನೆರವಿನೊಂದಿಗೆ ಪೀಟರ್ಸನ್, ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.