ಬೌಲಿಂಗ್ ವಿಭಾಗದಲ್ಲಿ ಅನುಭವದ ಕೊರತೆಯಿಂದಾಗಿ ದೊಡ್ಡ ಮೊತ್ತವನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಉಮ್ರಾನ್ ಮಲಿಕ್ ಮತ್ತು ಆರ್ಷದೀಪ್ ಸಿಂಗ್ ಅವರಿನ್ನೂ ಪಳಗಬೇಕು. ಉಮ್ರಾನ್ ಎರಡು ವಿಕೆಟ್ಗಳನ್ನು ಪಡೆದಿದ್ದರು. ಆದರೆ ಆರ್ಷದೀಪ್ ದುಬಾರಿಯಾಗಿದ್ದರು. ಶಾರ್ದೂಲ್ ಠಾಕೂರ್, ಸ್ಪಿನ್ನರ್ಗಳಾದ ವಾಷಿಂಗ್ಟನ್ ಸುಂದರ್ ಹಾಗೂ ಯಜುವೇಂದ್ರ ಚಾಹಲ್ ಟಿ20 ಮಾದರಿಯ ಲಯದಿಂದ ಹೊರಬಂದು ಏಕದಿನ ಮಾದರಿಗೆ ತಕ್ಕ ಬೌಲಿಂಗ್ ಮಾಡಿದರೆ ಗೆಲುವು ಒಲಿಯಬಹುದು.