‘ಎರಡನೇ ಅವಧಿಗೆ ಪುದುಚೇರಿ ತಂಡದ ಮುಖ್ಯ ಕೋಚ್ ಆಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಖುಷಿಯಾಗಿದೆ. ಕೋವಿಡ್ ಬಿಕ್ಕಟ್ಟು ಮುಂದುವರಿದಿರುವ ಕಾರಣ ದೇಶಿಯ ಋತು ಯಾವಾಗ ಆರಂಭವಾಗುತ್ತದೆ ಎಂಬುದು ಗೊತ್ತಿಲ್ಲ. ಮುಂದಿನ ಋತುವಿನಲ್ಲಿ ತಂಡದಿಂದ ಶ್ರೇಷ್ಠ ಸಾಮರ್ಥ್ಯ ಮೂಡಿಬರಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತೇನೆ’ ಎಂದು ಮುಂಬೈನ ಸಾಳ್ವಿ ಹೇಳಿದ್ದಾರೆ.