<p><strong>ಕಾಬೂಲ್:</strong> ಪಾಕಿಸ್ತಾನ ಹಾಗೂ ಅಫ್ಗನ್ ನಡುವೆ ಸಂಘರ್ಷ ಮುಂದುವರೆದಿದ್ದು ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ ಅಫ್ಗಾನಿಸ್ತಾನದ ಮೂವರು ಕ್ರಿಕೆಟರ್ಗಳು ಹಾಗೂ ಐವರು ನಾಗರೀಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ತಂಡ ಒಳಗೊಂಡ ತ್ರಿಕೋನ ಟಿ20ಐ ಸರಣಿಯಿಂದ ಅಫ್ಗಾನಿಸ್ತಾನ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ಅಫ್ಗನ್ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ. </p><p>ಪಾಕಿಸ್ತಾನ ನಡೆಸಿರುವುದು ಹೇಡಿತನದ ದಾಳಿ ಎಂದು ಅಫ್ಗಾನಿಸ್ತಾನ ಕಿಡಿಕಾರಿದೆ. ಮಾತ್ರವಲ್ಲ, ನವೆಂಬರ್ 17 ರಿಂದ 29 ರವರೆಗೆ ರಾವಲ್ಪಿಂಡಿ ಮತ್ತು ಲಾಹೋರ್ನಲ್ಲಿ ನಡೆಯಬೇಕಿದ್ದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳನ್ನು ಒಳಗೊಂಡ ತ್ರಿಕೋನ ಸರಣಿಯನ್ನು ಆಡದಿರಲು ನಿರ್ಧರಿಸಿರುವುದಾಗಿ ಎಸಿಬಿ ತಿಳಿಸಿದೆ.</p><p>'ಪಾಕಿಸ್ತಾನ ನಡೆಸಿರುವ ಹೇಡಿತನದ ದಾಳಿಯಿಂದ ಪಕ್ತಿಕಾ ಪ್ರಾಂತ್ಯದ ಉರ್ಗುನ್ ಜಿಲ್ಲೆಯಲ್ಲಿ ನಮ್ಮ ಮೂವರು ಧೈರ್ಯಶಾಲಿ ಕ್ರಿಕೆಟಿಗರು ಹಾಗೂ ಐವರು ನಾಗರೀಕರು ಮೃತಪಟ್ಟಿದ್ದು, ಅವರ ನಿಧನಕ್ಕೆ ಅಫ್ಗನ್ ಕ್ರಿಕೆಟ್ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ’ ಎಂದು ಎಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>. <p>‘ಈ ದುರಂತಕ್ಕೆ ಪ್ರತಿಯಾಗಿ ಮತ್ತು ಮೃತಪಟ್ಟವರ ಆತ್ಮಕ್ಕೆ ಗೌರವ ಸೂಚಿಸುವ ಸಂಕೇತವಾಗಿ ನವೆಂಬರ್ ಅಂತ್ಯದಲ್ಲಿ ನಡೆಯಬೇಕಿದ್ದ ಪಾಕಿಸ್ತಾನ ತಂಡವನ್ನು ಒಳಗೊಂಡ ತ್ರಿಕೋನ ಟಿ20ಐ ಸರಣಿಯಿಂದ ಅಫ್ಗಾನಿಸ್ತಾನ ಹಿಂದೆ ಸರಿಯಲು ನಿರ್ಧರಿಸಿದೆ‘ ಎಂದು ಎಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.</p>.ಗಡಿಯಲ್ಲಿ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಪಡೆಗಳ ನಡುವೆ ಗುಂಡಿನ ಚಕಮಕಿ.ಪಾಕಿಸ್ತಾನದಿಂದ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್:</strong> ಪಾಕಿಸ್ತಾನ ಹಾಗೂ ಅಫ್ಗನ್ ನಡುವೆ ಸಂಘರ್ಷ ಮುಂದುವರೆದಿದ್ದು ಪಾಕ್ ನಡೆಸಿದ ಮೈಮಾನಿಕ ದಾಳಿಯಲ್ಲಿ ಅಫ್ಗಾನಿಸ್ತಾನದ ಮೂವರು ಕ್ರಿಕೆಟರ್ಗಳು ಹಾಗೂ ಐವರು ನಾಗರೀಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ತಂಡ ಒಳಗೊಂಡ ತ್ರಿಕೋನ ಟಿ20ಐ ಸರಣಿಯಿಂದ ಅಫ್ಗಾನಿಸ್ತಾನ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ಅಫ್ಗನ್ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ. </p><p>ಪಾಕಿಸ್ತಾನ ನಡೆಸಿರುವುದು ಹೇಡಿತನದ ದಾಳಿ ಎಂದು ಅಫ್ಗಾನಿಸ್ತಾನ ಕಿಡಿಕಾರಿದೆ. ಮಾತ್ರವಲ್ಲ, ನವೆಂಬರ್ 17 ರಿಂದ 29 ರವರೆಗೆ ರಾವಲ್ಪಿಂಡಿ ಮತ್ತು ಲಾಹೋರ್ನಲ್ಲಿ ನಡೆಯಬೇಕಿದ್ದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳನ್ನು ಒಳಗೊಂಡ ತ್ರಿಕೋನ ಸರಣಿಯನ್ನು ಆಡದಿರಲು ನಿರ್ಧರಿಸಿರುವುದಾಗಿ ಎಸಿಬಿ ತಿಳಿಸಿದೆ.</p><p>'ಪಾಕಿಸ್ತಾನ ನಡೆಸಿರುವ ಹೇಡಿತನದ ದಾಳಿಯಿಂದ ಪಕ್ತಿಕಾ ಪ್ರಾಂತ್ಯದ ಉರ್ಗುನ್ ಜಿಲ್ಲೆಯಲ್ಲಿ ನಮ್ಮ ಮೂವರು ಧೈರ್ಯಶಾಲಿ ಕ್ರಿಕೆಟಿಗರು ಹಾಗೂ ಐವರು ನಾಗರೀಕರು ಮೃತಪಟ್ಟಿದ್ದು, ಅವರ ನಿಧನಕ್ಕೆ ಅಫ್ಗನ್ ಕ್ರಿಕೆಟ್ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ’ ಎಂದು ಎಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>. <p>‘ಈ ದುರಂತಕ್ಕೆ ಪ್ರತಿಯಾಗಿ ಮತ್ತು ಮೃತಪಟ್ಟವರ ಆತ್ಮಕ್ಕೆ ಗೌರವ ಸೂಚಿಸುವ ಸಂಕೇತವಾಗಿ ನವೆಂಬರ್ ಅಂತ್ಯದಲ್ಲಿ ನಡೆಯಬೇಕಿದ್ದ ಪಾಕಿಸ್ತಾನ ತಂಡವನ್ನು ಒಳಗೊಂಡ ತ್ರಿಕೋನ ಟಿ20ಐ ಸರಣಿಯಿಂದ ಅಫ್ಗಾನಿಸ್ತಾನ ಹಿಂದೆ ಸರಿಯಲು ನಿರ್ಧರಿಸಿದೆ‘ ಎಂದು ಎಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.</p>.ಗಡಿಯಲ್ಲಿ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಪಡೆಗಳ ನಡುವೆ ಗುಂಡಿನ ಚಕಮಕಿ.ಪಾಕಿಸ್ತಾನದಿಂದ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>