ಮುಂಬೈ: ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಹಸಿದವರಿಗೆ ಆಹಾರ ನೀಡಲು ಮುಂದಾಗಿದ್ದಾರೆ.
ಕೋವಿಡ್–19ನಿಂದ ಬಳಲುತ್ತಿರುವವರಿಗೆ ಸಹಾಯ ಹಸ್ತ ಚಾಚಿದ್ದ ಸಚಿನ್, ಈ ಹಿಂದೆ ₹50 ಲಕ್ಷ ದೇಣಿಗೆ ನೀಡಿದ್ದರು.
ಅಪ್ನಾಲಯ ಸ್ವಯಂ ಸೇವಾ ಸಂಸ್ಥೆ ಜೊತೆ ಕೈಜೋಡಿಸಿರುವ ಸಚಿನ್, 5000 ಮಂದಿಗೆ ಒಂದು ತಿಂಗಳು ದಿನಸಿ ಒದಗಿಸಲು ತೀರ್ಮಾನಿಸಿದ್ದಾರೆ.
‘ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನಾವು ಆಹಾರ ಪೂರೈಸುತ್ತಿದ್ದೇವೆ. ನಮ್ಮ ಈ ಕಾರ್ಯಕ್ಕೆ ಸಚಿನ್ ತೆಂಡೂಲ್ಕರ್ ಕೈಜೋಡಿಸಿದ್ದಾರೆ. ಅವರಿಗೆ ಕೃತಜ್ಞತೆಗಳು’ ಎಂದು ಶುಕ್ರವಾರ ಅಪ್ನಾಲಯ ಸಂಸ್ಥೆ ಟ್ವೀಟ್ ಮಾಡಿದೆ.
‘ನಿರ್ಗತಿಕರ ನೋವಿಗೆ ಮಿಡಿದಿರುವ ಅಪ್ನಾಲಯ ಸಂಸ್ಥೆಗೆ ಶುಭವಾಗಲಿ. ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ. ಇದನ್ನು ಹೀಗೆ ಮುಂದುವರಿಸಿ’ ಎಂದು ಸಚಿನ್ ಪ್ರತಿಕ್ರಿಯಿಸಿದ್ದಾರೆ.