ಕೃಣಾಲ್ ಅವರ ನಿಕಟ ಸಂಪರ್ಕ ಹೊಂದಿದ್ದರು ಎಂದು ಗುರುತಿಸಲಾದ ಎಂಟು ಮಂದಿ ಆಟಗಾರರಲ್ಲಿ ಗೌತಮ್ ಮತ್ತು ಚಾಹಲ್ ಕೂಡ ಇದ್ದರು. ಈ ಅವರಿಗೆ ಸೋಂಕು ಇರುವುದು ಖಚಿತಪಟ್ಟಿದೆ. ಇನ್ನುಳಿದ ಆರು ಆಟಗಾರರಾದ ಹಾರ್ದಿಕ್ ಪಾಂಡ್ಯ, ಮನೀಷ್ ಪಾಂಡೆ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಮತ್ತು ದೀಪಕ್ ಚಾಹರ್ ಅವರಿಗೆ ಭಾರತಕ್ಕೆ ಮರಳಲು ಅನುಮತಿ ದೊರೆತಿದೆ.