<p><strong>ಮುಂಬೈ:</strong> ಮುಂಬರುವ ರಣಜಿ ಟ್ರೋಫಿಗೂ ಮುನ್ನ ಮುಂಬೈ ತಂಡದ ನಾಯಕತ್ವಕ್ಕೆ ಭಾರತ ತಂಡದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಗುರುವಾರ ರಾಜೀನಾಮೆ ನೀಡಿದ್ದು, ಹೊಸ ನಾಯಕನನ್ನು ಆಯ್ಕೆ ಮಾಡುವುದಕ್ಕೆ ಇದು ಸರಿಯಾದ ಸಮಯ ಎಂದು ಹೇಳಿದ್ದಾರೆ.</p><p>201 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿರುವ 37 ವರ್ಷದ ರಹಾನೆ 14,000 ರನ್ ಗಳಿಸಿದ್ದಾರೆ. ಮುಂಬೈ ತಂಡದಲ್ಲಿ ಬ್ಯಾಟರ್ ಆಗಿ ಮುಂದುವರಿಯಲಿದ್ದಾರೆ. ಅಕ್ಟೋಬರ್ 15ರಂದು ರಣಜಿ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಮುಂಬೈ ತಂಡವು ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ.</p><p>‘ಮುಂಬೈ ತಂಡದ ನಾಯಕತ್ವ ವಹಿಸಿಕೊಂಡು ಚಾಂಪಿಯನ್ಶಿಪ್ಗಳನ್ನು ಗೆದ್ದಿರುವುದು ಸಂಪೂರ್ಣ ಗೌರವ ಸಿಕ್ಕಂತಾಗಿದೆ. ಮುಂಬರುವ ಹೊಸ ದೇಶೀಯ ಋತುವಿನಲ್ಲಿ ಹೊಸ ನಾಯಕನನ್ನು ನೇಮಿಸಿಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ. ಆದ್ದರಿಂದ ನಾನು ನಾಯಕನಾಗಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ’ ಎಂದು ರಹಾನೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ಆಟಗಾರನಾಗಿ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಸಂಪೂರ್ಣ ಬದ್ಧನಾಗಿರುತ್ತೇನೆ ಮತ್ತು ಹೆಚ್ಚಿನ ಟ್ರೋಫಿಗಳನ್ನು ಗೆಲ್ಲಲು ನಮಗೆ ಸಹಾಯ ಮಾಡುವ ಮುಂಬೈ ಕ್ರಿಕೆಟ್ ಅಸೋಸಿಯೇಷನ್ನೊಂದಿಗೆ ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ. ಹೊಸ ಋತುವಿಗಾಗಿ ಎದುರು ನೋಡುತ್ತಿದ್ದೇನೆ’ ಎಂದೂ ರಹಾನೆ ತಿಳಿಸಿದ್ದಾರೆ. </p>.<p>ಮುಂಬೈ ತಂಡವು ರಹಾನೆ ನಾಯಕತ್ವದಲ್ಲಿ 2023-24ರ ಋತುವಿನ ಫೈನಲ್ನಲ್ಲಿ ವಿದರ್ಭ ವಿರುದ್ಧ ಜಯ ಗಳಿಸುವ ಮೂಲಕ ರಣಜಿ ಟ್ರೋಫಿಯನ್ನು ಗೆದ್ದುಕೊಂಡಿತ್ತು.</p><p>ಟೀಮ್ ಇಂಡಿಯಾ ಪರ 85 ಟೆಸ್ಟ್ ಪಂದ್ಯಗಳನ್ನು ಆಡಿರುವ ರಹಾನೆ, ಕೊನೆಯದಾಗಿ 2023ರ ಜುಲೈಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿದ್ದರು. ಜತೆಗೆ, 90 ಏಕದಿನ ಮತ್ತು 20 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿಯೂ ತಂಡವನ್ನು ಪ್ರತಿನಿಧಿಸಿದ್ದಾರೆ. </p><p>ರಹಾನೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮುಂಬರುವ ರಣಜಿ ಟ್ರೋಫಿಗೂ ಮುನ್ನ ಮುಂಬೈ ತಂಡದ ನಾಯಕತ್ವಕ್ಕೆ ಭಾರತ ತಂಡದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಗುರುವಾರ ರಾಜೀನಾಮೆ ನೀಡಿದ್ದು, ಹೊಸ ನಾಯಕನನ್ನು ಆಯ್ಕೆ ಮಾಡುವುದಕ್ಕೆ ಇದು ಸರಿಯಾದ ಸಮಯ ಎಂದು ಹೇಳಿದ್ದಾರೆ.</p><p>201 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿರುವ 37 ವರ್ಷದ ರಹಾನೆ 14,000 ರನ್ ಗಳಿಸಿದ್ದಾರೆ. ಮುಂಬೈ ತಂಡದಲ್ಲಿ ಬ್ಯಾಟರ್ ಆಗಿ ಮುಂದುವರಿಯಲಿದ್ದಾರೆ. ಅಕ್ಟೋಬರ್ 15ರಂದು ರಣಜಿ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಮುಂಬೈ ತಂಡವು ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ.</p><p>‘ಮುಂಬೈ ತಂಡದ ನಾಯಕತ್ವ ವಹಿಸಿಕೊಂಡು ಚಾಂಪಿಯನ್ಶಿಪ್ಗಳನ್ನು ಗೆದ್ದಿರುವುದು ಸಂಪೂರ್ಣ ಗೌರವ ಸಿಕ್ಕಂತಾಗಿದೆ. ಮುಂಬರುವ ಹೊಸ ದೇಶೀಯ ಋತುವಿನಲ್ಲಿ ಹೊಸ ನಾಯಕನನ್ನು ನೇಮಿಸಿಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ. ಆದ್ದರಿಂದ ನಾನು ನಾಯಕನಾಗಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ’ ಎಂದು ರಹಾನೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>‘ಆಟಗಾರನಾಗಿ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಸಂಪೂರ್ಣ ಬದ್ಧನಾಗಿರುತ್ತೇನೆ ಮತ್ತು ಹೆಚ್ಚಿನ ಟ್ರೋಫಿಗಳನ್ನು ಗೆಲ್ಲಲು ನಮಗೆ ಸಹಾಯ ಮಾಡುವ ಮುಂಬೈ ಕ್ರಿಕೆಟ್ ಅಸೋಸಿಯೇಷನ್ನೊಂದಿಗೆ ನನ್ನ ಪ್ರಯಾಣವನ್ನು ಮುಂದುವರಿಸುತ್ತೇನೆ. ಹೊಸ ಋತುವಿಗಾಗಿ ಎದುರು ನೋಡುತ್ತಿದ್ದೇನೆ’ ಎಂದೂ ರಹಾನೆ ತಿಳಿಸಿದ್ದಾರೆ. </p>.<p>ಮುಂಬೈ ತಂಡವು ರಹಾನೆ ನಾಯಕತ್ವದಲ್ಲಿ 2023-24ರ ಋತುವಿನ ಫೈನಲ್ನಲ್ಲಿ ವಿದರ್ಭ ವಿರುದ್ಧ ಜಯ ಗಳಿಸುವ ಮೂಲಕ ರಣಜಿ ಟ್ರೋಫಿಯನ್ನು ಗೆದ್ದುಕೊಂಡಿತ್ತು.</p><p>ಟೀಮ್ ಇಂಡಿಯಾ ಪರ 85 ಟೆಸ್ಟ್ ಪಂದ್ಯಗಳನ್ನು ಆಡಿರುವ ರಹಾನೆ, ಕೊನೆಯದಾಗಿ 2023ರ ಜುಲೈಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿದ್ದರು. ಜತೆಗೆ, 90 ಏಕದಿನ ಮತ್ತು 20 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿಯೂ ತಂಡವನ್ನು ಪ್ರತಿನಿಧಿಸಿದ್ದಾರೆ. </p><p>ರಹಾನೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>