ಇಲ್ಲಿನ ಬಿಜೆಪಿ ನಾಯಕರಿಗೆ ಫೇಸ್ ವ್ಯಾಲ್ಯೂನೇ ಇಲ್ಲ. ಆದ್ದರಿಂದ ಮೋದಿ ಮತ್ತು ಅಮಿತ್ ಶಾ ಅವರನ್ನು ಕರೆಸಿದ್ದಾರೆ. ಇದು ರಾಜ್ಯದ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ. ತಮ್ಮ ಕೈಯಲ್ಲಿ ಆಗದ ಕಾರಣ ಮೋದಿಯರ ಮೇಲೆ ಅವಲಂಬಿತರಾಗಿದ್ದಾರೆ. ಇಲ್ಲಿವರೆಗೆ ಏಳರಿಂದ ಎಂಟು ಬಾರಿ ಬಂದು ಹೋಗಿದ್ದಾರೆ. ಅವರ ಪ್ರಭಾವ ಆಗಿಲ್ಲ. ಇವರು ಪ್ರಚಾರದಲ್ಲಿ ಬಳಸುತ್ತಿರುವ ಭಾಷೆ ನಾಗರೀಕವಲ್ಲ, ಕೀಳು ಮಟ್ಟದ ಅಸಂಸದೀಯ ಪದಗಳನ್ನು ಬಳಕೆ ಮಾಡುತ್ತಿದ್ದರೆ ಎಂದು ಸಿದ್ದರಾಮಯ್ಯ ಹೇಳಿದರು.