ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಅಭಿವೃದ್ಧಿ: ಸಿಎಂ ಕುಮಾರಸ್ವಾಮಿ ಜತೆ ನಾರಾಯಣಮೂರ್ತಿ ಮಾತುಕತೆ

Last Updated 1 ಜೂನ್ 2018, 7:37 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಕುರಿತು ಇನ್ಫೋಸಿಸ್ ನ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಸದ್ಯದಲ್ಲೇ ತಮ್ಮ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಾರಾಯಣಮೂರ್ತಿ ಅವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸಿದರು.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ  ಹಾಗೂ ಇನ್ನಿತರ ಮಹತ್ವದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮಾರ್ಗದರ್ಶನ ನೀಡುವಂತೆ ನಾರಾಯಣ ಮೂರ್ತಿಯವರನ್ನು ಕೋರಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿಯೇ ರಚಿಸಲಾಗುವ ಈ ಸಮಿತಿ ಎರಡು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸುತ್ತದೆ

ಈ ಸಮಿತಿಯ ಭಾಗವಾಗಿರಲು ನನಗೆ ಹೆಮ್ಮೆ ಇದೆ ಎಂದ ನಾರಾಯಣ ಮೂರ್ತಿ ಅವರು ಇನ್ನು ಎರಡು ತಿಂಗಳಲ್ಲಿ ತಮ್ಮ ಸಲಹೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಆಶ್ವಾಸನೆ ನೀಡಿದರು.

ನೀವು ಅಧಿಕಾರದಲ್ಲಿರುವಾಗಲೂ, ಇಲ್ಲದಿರುವಾಗಲೂ ನಿಮ್ಮ ಚಟುವಟಿಕೆಗಳನ್ನು ನಾನು ಹತ್ತಿರದಿಂದ ಗಮನಿಸುತ್ತಿದ್ದೇನೆ. ನೀವು ರಾಜ್ಯದ ಜನತೆಗೆ, ಕೃಷಿಕರಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯವಾಗಿದೆ. ಇಸ್ರೇಲ್ ಗೆ ಭೇಟಿ ನೀಡಿ ಕೃಷಿ ಪದ್ದತಿಯ ಅಧ್ಯಯನ ನಡೆಸಿದ್ದರ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತಹ ಸಂದರ್ಭದಲ್ಲಿ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಎನ್ ಜಿ ಓ ಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಾರಾಯಣ ಮೂರ್ತಿ ಅವರು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT