ದುಬೈ: ಪಾಕಿಸ್ತಾನವನ್ನು ಸುಲಭವಾಗಿ ಮಣಿಸಿದ ಭಾರತ ತಂಡ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಶುಕ್ರವಾರ ಬಾಂಗ್ಲಾದೇಶ ವಿರುದ್ಧ ಸೆಣಸಲಿದೆ.
ಸದ್ಯ ಬಾಂಗ್ಲಾದೇಶದ ವಿರುದ್ಧ ಟಾಸ್ ಗೆದ್ದಿರುವ ರೋಹಿತ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತದ ಪರಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಗಾಯಗೊಂಡಿರುವ ಕಾರಣಅವರ ಬದಲಿಗೆ ಖಲೀಲ್ ಅಹಮ್ಮದ್, ಸಿದ್ಧಾರ್ಥ್ ಕೌಲ್, ರವೀಂದ್ರ ಜಡೇಜಗೆ ಅವಕಾಶ ನೀಡಲಾಗಿದೆ.
ಆರಂಭಿಕ ಜೋಡಿ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಲಯ ಕಂಡುಕೊಂಡಿರುವುದು ಭಾರತಕ್ಕೆ ಸಮಾಧಾನ ತಂದಿದೆ.
ಬಲಿಷ್ಠ ಎದುರಾಳಿ: ಎಲ್ಲ ವಿಭಾಗದಲ್ಲೂ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ.