<p><strong>ದುಬೈ:</strong> ಅಫ್ಗಾನಿಸ್ತಾನ ವಿರುದ್ಧದ ಕೊನೆಯ ಲೀಗ್ ಪಂದ್ಯದ ಸಂದರ್ಭದಲ್ಲಿ ಶ್ರೀಲಂಕಾ ತಂಡದ ಯುವ ಆಲ್ರೌಂಡರ್ ದುನಿತ್ ವೆಲ್ಲಾಳಗೆ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹಾಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತವರಿಗೆ ಆಗಮಿಸಿದ್ದರು. ಇದೀಗ ಮತ್ತೆ ಅವರು ತಮ್ಮ ತಂಡ ಸೇರಿಕೊಂಡಿದ್ದಾರೆ.</p><p>ಶ್ರೀಲಂಕಾದಿಂದ ದುಬೈಗೆ ಆಗಮಿಸಿರುವ ಅವರು ಇಂದು (ಶನಿವಾರ) ನಡೆಯಲಿರುವ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಲಭ್ಯವಿದ್ದಾರೆ. ವೆಲ್ಲಾಳಗೆ ತಂದೆ ಸುರಂಗ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಅಫ್ಗಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ತವರಿಗೆ ಮರಳಿದ್ದರು.</p><p>ಅಫ್ಗಾನಿಸ್ತಾನ ವಿರುದ್ಧದ ಪಂದ್ಯ ಮುಕ್ತಾಯವಾಗುತ್ತಿದ್ದಂತೆ ವೆಲ್ಲಾಳಗೆಗೆ ತಂದೆ ನಿಧನದ ಸುದ್ದಿ ತಿಳಿಸಲಾಯಿತು. ಬಳಿಕ ಕೊಲಂಬೋಗೆ ಲಭ್ಯವಿರುವ ವಿಮಾನದ ಮೂಲಕ ತವರಿಗೆ ಆಗಮಿಸಿದ್ದರು. ಬಳಿಕ ತಂದೆಯ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆ ಶುಕ್ರವಾರ ರಾತ್ರಿ ತಂಡದ ವ್ಯವಸ್ಥಾಪಕ ಮಹಿಂದ ಹಲಂಗೋಡ್ ಅವರೊಂದಿಗೆ ಯುಎಇಗೆ ವಾಪಾಸ್ಸಾದರು.</p><p>ಶ್ರೀಲಂಕಾ ತಂಡ ಬಲಿಷ್ಠವಾಗಿದ್ದು, ಇಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದ ನಂತರ, ಸೆ. 23 ರಂದು ಪಾಕಿಸ್ತಾನ ಮತ್ತು ಸೆ. 26 ರಂದು ಭಾರತ ತಂಡವನ್ನು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಅಫ್ಗಾನಿಸ್ತಾನ ವಿರುದ್ಧದ ಕೊನೆಯ ಲೀಗ್ ಪಂದ್ಯದ ಸಂದರ್ಭದಲ್ಲಿ ಶ್ರೀಲಂಕಾ ತಂಡದ ಯುವ ಆಲ್ರೌಂಡರ್ ದುನಿತ್ ವೆಲ್ಲಾಳಗೆ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹಾಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತವರಿಗೆ ಆಗಮಿಸಿದ್ದರು. ಇದೀಗ ಮತ್ತೆ ಅವರು ತಮ್ಮ ತಂಡ ಸೇರಿಕೊಂಡಿದ್ದಾರೆ.</p><p>ಶ್ರೀಲಂಕಾದಿಂದ ದುಬೈಗೆ ಆಗಮಿಸಿರುವ ಅವರು ಇಂದು (ಶನಿವಾರ) ನಡೆಯಲಿರುವ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಲಭ್ಯವಿದ್ದಾರೆ. ವೆಲ್ಲಾಳಗೆ ತಂದೆ ಸುರಂಗ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಅಫ್ಗಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ತವರಿಗೆ ಮರಳಿದ್ದರು.</p><p>ಅಫ್ಗಾನಿಸ್ತಾನ ವಿರುದ್ಧದ ಪಂದ್ಯ ಮುಕ್ತಾಯವಾಗುತ್ತಿದ್ದಂತೆ ವೆಲ್ಲಾಳಗೆಗೆ ತಂದೆ ನಿಧನದ ಸುದ್ದಿ ತಿಳಿಸಲಾಯಿತು. ಬಳಿಕ ಕೊಲಂಬೋಗೆ ಲಭ್ಯವಿರುವ ವಿಮಾನದ ಮೂಲಕ ತವರಿಗೆ ಆಗಮಿಸಿದ್ದರು. ಬಳಿಕ ತಂದೆಯ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆ ಶುಕ್ರವಾರ ರಾತ್ರಿ ತಂಡದ ವ್ಯವಸ್ಥಾಪಕ ಮಹಿಂದ ಹಲಂಗೋಡ್ ಅವರೊಂದಿಗೆ ಯುಎಇಗೆ ವಾಪಾಸ್ಸಾದರು.</p><p>ಶ್ರೀಲಂಕಾ ತಂಡ ಬಲಿಷ್ಠವಾಗಿದ್ದು, ಇಂದು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದ ನಂತರ, ಸೆ. 23 ರಂದು ಪಾಕಿಸ್ತಾನ ಮತ್ತು ಸೆ. 26 ರಂದು ಭಾರತ ತಂಡವನ್ನು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>