<p><strong>ದುಬೈ: </strong>2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಬುಧವಾರ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂಬತ್ತು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.</p><p>ಯುಎಇ ಒಡ್ಡಿದ 58 ರನ್ಗಳ ಗೆಲುವಿನ ಗುರಿಯನ್ನು ಭಾರತ ಕೇವಲ 4.3 ಓವರ್ನಲ್ಲೇ ಒಂದು ವಿಕೆಟ್ ನಷ್ಟಕ್ಕೆ ಬೆನ್ನಟ್ಟಿತು. ಆ ಮೂಲಕ ಏಷ್ಯಾ ಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ.</p><p>ಟಾಸ್ ಗೆದ್ದ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.</p><p>ಬಳಿಕ ನಾಯಕನ ನಿರ್ಧಾರ ಸರಿ ಎಂದು ಸಾಬೀತುಪಡಿಸಿದ ಟೀಮ್ ಇಂಡಿಯಾದ ಬೌಲರ್ಗಳು, ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. </p><p>ಯುಎಇ 13.1 ಓವರ್ಗಳಲ್ಲಿ ಕೇವಲ 57 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಈ ಗುರಿ ಬೆನ್ನಟ್ಟಿದ ಭಾರತ 4.3 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 30 ರನ್ (3 ಸಿಕ್ಸರ್, 2 ಬೌಂಡರಿ) ಗಳಿಸಿದರು. ಶುಭಮನ್ ಗಿಲ್ ಔಟಾಗದೆ 20 ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 7 ರನ್ ಗಳಿಸಿದರು. </p><p>ಭಾರತದ ಪರ ಕುಲದೀಪ್ ಯಾದವ್ ಹಾಗೂ ಶಿವಂ ದುಬೆ ತಲಾ ಮೂರು ವಿಕೆಟ್ಗಳನ್ನು ಕಬಳಿಸಿದರು. ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ತಲಾ ಒಂದು ವಿಕೆಟನ್ನು ಗಳಿಸಿದರು. </p><p>ಯುಎಇ ಪರ ಆರಂಭಿಕರಾದ ಅಲಿಶಾನ್ ಶರಾಫು (22) ಹಾಗೂ ನಾಯಕ ಮುಹಮ್ಮದ್ ವಾಸೀಮ್ (19) ಮೊದಲ ವಿಕೆಟ್ಗೆ 3.4 ಓವರ್ಗಳಲ್ಲಿ 26 ರನ್ ಪೇರಿಸಿದರು. </p><p>ಆದರೆ ಈ ವಿಕೆಟ್ ಪತನದ ಬೆನ್ನಲ್ಲೇ ದಿಢೀರ್ ಪತನವನ್ನು ಕಂಡಿತು. ಅಲ್ಲದೆ 10 ವಿಕೆಟ್ಗಳನ್ನು 31 ರನ್ ಅಂತರದಲ್ಲಿ ಕಳೆದುಕೊಂಡಿತು. </p><p>ಆರಂಭಿಕರನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್ ಕೂಡ ಎರಡಂಕಿಯ ಮೊತ್ತವನ್ನು ದಾಟಲಿಲ್ಲ. ಭಾರತದ ಪರ ಕುಲದೀಪ್ ಯಾದವ್ ಒಂದೇ ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿ ಮಿಂಚಿದರು. </p>.Asia Cup: ಒಂದೇ ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿದ ಕುಲದೀಪ್ ಯಾದವ್.ಏಷ್ಯಾ ಕಪ್: ಅಫ್ಗನ್ಗೆ ಮಣಿದ ಹಾಂಗ್ಕಾಂಗ್. <p><strong>ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ...</strong></p><p>2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಬುಧವಾರ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. </p><p>ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿಕೊಳ್ಳುವ ತವಕದಲ್ಲಿದ್ದಾರೆ. </p><p>ಏಷ್ಯಾ ಕಪ್ ಟೂರ್ನಿಯಲ್ಲಿ ಮಂಗಳವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಹಾಂಗ್ಕಾಂಗ್ ವಿರುದ್ಧ ಅಫ್ಗಾನಿಸ್ತಾನ ಗೆಲುವು ದಾಖಲಿಸಿತ್ತು. </p>. <p><strong>ಗಿಲ್ ಪುನರಾಗಮನ, ಸಂಜುಗೆ ಅವಕಾಶ...</strong></p><p>ಉಪನಾಯಕ ಶುಭಮನ್ ಗಿಲ್ ಟಿ20 ತಂಡಕ್ಕೆ ಪುನರಾಗಮನ ಮಾಡಿಕೊಂಡಿದ್ದಾರೆ. ಅವರು ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ. </p><p>ಟಿ20 ಆರಂಭಿಕನಾಗಿ ಗುರುತಿಸಿಕೊಂಡಿದ್ದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸಹ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.</p><p>ಇದರಿಂದಾಗಿ ಆರ್ಸಿಬಿಯ ತಾರೆ ಜಿತೇಶ್ ಶರ್ಮಾ ಅವರು ತಮ್ಮ ಅವಕಾಶಕ್ಕಾಗಿ ಮತ್ತಷ್ಟು ಕಾಯಬೇಕಿದೆ. </p><p>ಇನ್ನು ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಜೊತೆಗೆ ತಿಲಕ್ ವರ್ಮಾ ಹಾಗೂ ಶಿವಂ ದುಬೆ ಸಹ ತಂಡದಲ್ಲಿದ್ದಾರೆ. </p><p>ಜಸ್ಪ್ರೀತ್ ಬೂಮ್ರಾ ಆಡುವ ಬಳಗದಲ್ಲಿರುವ ಏಕೈಕ ವೇಗಿಯಾಗಿದ್ದು, ಸ್ಪಿನ್ ದ್ವಯರಾದ ವರುಣ್ ಚಕ್ರವರ್ತಿ ಹಾಗೂ ಕುಲದೀಪ್ ಯಾದವ್ ಅವರಿಗೆ ಅವಕಾಶ ನೀಡಲಾಗಿದೆ. </p>.Asia Cup: ಮೊದಲ ಪಂದ್ಯದಲ್ಲೇ ಸೂರ್ಯಕುಮಾರ್ ದಾಖಲೆ ಮುರಿದ ಅಫ್ಗಾನ್ ಬ್ಯಾಟರ್.ಏಷ್ಯಾ ಕಪ್ ಕ್ರಿಕೆಟ್|ಭಾರತಕ್ಕೆ ಯುಎಇ ಎದುರಾಳಿ: ಸೂರ್ಯ ಬಳಗಕ್ಕೆ ಪ್ರಯೋಗದ ವೇದಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ: </strong>2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಬುಧವಾರ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂಬತ್ತು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.</p><p>ಯುಎಇ ಒಡ್ಡಿದ 58 ರನ್ಗಳ ಗೆಲುವಿನ ಗುರಿಯನ್ನು ಭಾರತ ಕೇವಲ 4.3 ಓವರ್ನಲ್ಲೇ ಒಂದು ವಿಕೆಟ್ ನಷ್ಟಕ್ಕೆ ಬೆನ್ನಟ್ಟಿತು. ಆ ಮೂಲಕ ಏಷ್ಯಾ ಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ.</p><p>ಟಾಸ್ ಗೆದ್ದ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.</p><p>ಬಳಿಕ ನಾಯಕನ ನಿರ್ಧಾರ ಸರಿ ಎಂದು ಸಾಬೀತುಪಡಿಸಿದ ಟೀಮ್ ಇಂಡಿಯಾದ ಬೌಲರ್ಗಳು, ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. </p><p>ಯುಎಇ 13.1 ಓವರ್ಗಳಲ್ಲಿ ಕೇವಲ 57 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಈ ಗುರಿ ಬೆನ್ನಟ್ಟಿದ ಭಾರತ 4.3 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 30 ರನ್ (3 ಸಿಕ್ಸರ್, 2 ಬೌಂಡರಿ) ಗಳಿಸಿದರು. ಶುಭಮನ್ ಗಿಲ್ ಔಟಾಗದೆ 20 ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 7 ರನ್ ಗಳಿಸಿದರು. </p><p>ಭಾರತದ ಪರ ಕುಲದೀಪ್ ಯಾದವ್ ಹಾಗೂ ಶಿವಂ ದುಬೆ ತಲಾ ಮೂರು ವಿಕೆಟ್ಗಳನ್ನು ಕಬಳಿಸಿದರು. ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ತಲಾ ಒಂದು ವಿಕೆಟನ್ನು ಗಳಿಸಿದರು. </p><p>ಯುಎಇ ಪರ ಆರಂಭಿಕರಾದ ಅಲಿಶಾನ್ ಶರಾಫು (22) ಹಾಗೂ ನಾಯಕ ಮುಹಮ್ಮದ್ ವಾಸೀಮ್ (19) ಮೊದಲ ವಿಕೆಟ್ಗೆ 3.4 ಓವರ್ಗಳಲ್ಲಿ 26 ರನ್ ಪೇರಿಸಿದರು. </p><p>ಆದರೆ ಈ ವಿಕೆಟ್ ಪತನದ ಬೆನ್ನಲ್ಲೇ ದಿಢೀರ್ ಪತನವನ್ನು ಕಂಡಿತು. ಅಲ್ಲದೆ 10 ವಿಕೆಟ್ಗಳನ್ನು 31 ರನ್ ಅಂತರದಲ್ಲಿ ಕಳೆದುಕೊಂಡಿತು. </p><p>ಆರಂಭಿಕರನ್ನು ಹೊರತುಪಡಿಸಿದರೆ ಇತರೆ ಯಾವ ಬ್ಯಾಟರ್ ಕೂಡ ಎರಡಂಕಿಯ ಮೊತ್ತವನ್ನು ದಾಟಲಿಲ್ಲ. ಭಾರತದ ಪರ ಕುಲದೀಪ್ ಯಾದವ್ ಒಂದೇ ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿ ಮಿಂಚಿದರು. </p>.Asia Cup: ಒಂದೇ ಓವರ್ನಲ್ಲಿ ಮೂರು ವಿಕೆಟ್ ಕಬಳಿಸಿದ ಕುಲದೀಪ್ ಯಾದವ್.ಏಷ್ಯಾ ಕಪ್: ಅಫ್ಗನ್ಗೆ ಮಣಿದ ಹಾಂಗ್ಕಾಂಗ್. <p><strong>ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ...</strong></p><p>2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಬುಧವಾರ) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. </p><p>ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿಕೊಳ್ಳುವ ತವಕದಲ್ಲಿದ್ದಾರೆ. </p><p>ಏಷ್ಯಾ ಕಪ್ ಟೂರ್ನಿಯಲ್ಲಿ ಮಂಗಳವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಹಾಂಗ್ಕಾಂಗ್ ವಿರುದ್ಧ ಅಫ್ಗಾನಿಸ್ತಾನ ಗೆಲುವು ದಾಖಲಿಸಿತ್ತು. </p>. <p><strong>ಗಿಲ್ ಪುನರಾಗಮನ, ಸಂಜುಗೆ ಅವಕಾಶ...</strong></p><p>ಉಪನಾಯಕ ಶುಭಮನ್ ಗಿಲ್ ಟಿ20 ತಂಡಕ್ಕೆ ಪುನರಾಗಮನ ಮಾಡಿಕೊಂಡಿದ್ದಾರೆ. ಅವರು ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ. </p><p>ಟಿ20 ಆರಂಭಿಕನಾಗಿ ಗುರುತಿಸಿಕೊಂಡಿದ್ದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಸಹ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.</p><p>ಇದರಿಂದಾಗಿ ಆರ್ಸಿಬಿಯ ತಾರೆ ಜಿತೇಶ್ ಶರ್ಮಾ ಅವರು ತಮ್ಮ ಅವಕಾಶಕ್ಕಾಗಿ ಮತ್ತಷ್ಟು ಕಾಯಬೇಕಿದೆ. </p><p>ಇನ್ನು ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಜೊತೆಗೆ ತಿಲಕ್ ವರ್ಮಾ ಹಾಗೂ ಶಿವಂ ದುಬೆ ಸಹ ತಂಡದಲ್ಲಿದ್ದಾರೆ. </p><p>ಜಸ್ಪ್ರೀತ್ ಬೂಮ್ರಾ ಆಡುವ ಬಳಗದಲ್ಲಿರುವ ಏಕೈಕ ವೇಗಿಯಾಗಿದ್ದು, ಸ್ಪಿನ್ ದ್ವಯರಾದ ವರುಣ್ ಚಕ್ರವರ್ತಿ ಹಾಗೂ ಕುಲದೀಪ್ ಯಾದವ್ ಅವರಿಗೆ ಅವಕಾಶ ನೀಡಲಾಗಿದೆ. </p>.Asia Cup: ಮೊದಲ ಪಂದ್ಯದಲ್ಲೇ ಸೂರ್ಯಕುಮಾರ್ ದಾಖಲೆ ಮುರಿದ ಅಫ್ಗಾನ್ ಬ್ಯಾಟರ್.ಏಷ್ಯಾ ಕಪ್ ಕ್ರಿಕೆಟ್|ಭಾರತಕ್ಕೆ ಯುಎಇ ಎದುರಾಳಿ: ಸೂರ್ಯ ಬಳಗಕ್ಕೆ ಪ್ರಯೋಗದ ವೇದಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>