<p><strong>ಕೊಲಂಬೊ</strong>: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ನಡೆದ ಮೈದಾನಗಳಲ್ಲಿ ಕಾರ್ಯನಿರ್ವಹಿಸಿದ ಪಿಚ್ ಕ್ಯೂರೇಟರ್ ಮತ್ತು ಸಿಬ್ಬಂದಿಗಳಿಗೆ ₹ 42 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ.</p>.<p>ಈ ಸಲದ ಏಷ್ಯಾ ಕಪ್ ಟೂರ್ನಿಯಲ್ಲಿ ನಡೆದ ಬಹುತೇಕ ಎಲ್ಲ ಪಂದ್ಯಗಳ ಸಂದರ್ಭದಲ್ಲಿಯೂ ಮಳೆ ಸುರಿದಿದೆ. ಈ ಸಂದರ್ಭಗಳಲ್ಲಿ ಮೈದಾನ ಸಿಬ್ಬಂದಿಯು ಚುರುಕುತನದಿಂದ ಕಾರ್ಯನಿರ್ವಹಿಸಿತ್ತು. ದೇಶ, ವಿದೇಶಗಳ ಕ್ರಿಕೆಟ್ ಪ್ರೇಮಿಗಳು ಮತ್ತು ದಿಗ್ಗಜ ಕ್ರಿಕೆಟಿಗರಿಂದ ಪ್ರಶಂಸೆಯ ಸುರಿಮಳೆಯಾಗಿತ್ತು.</p>.<p>‘ಕ್ರಿಕೆಟ್ ಆಟದ ಎಲೆ ಮರೆಯ ತಾರೆಯರಿಗೆ ಅಪಾರ ಅಭಿನಂದನೆಗಳು. ಅವರಿಗೆ ₹42 ಲಕ್ಷ ಬಹುಮಾನ ಘೋಷಿಸಲು ಹರ್ಷವಾಗುತ್ತಿದೆ. ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯೊಂದಿಗೆ ಈ ಕಾರ್ಯ ಮಾಡುತ್ತಿದ್ದೇವೆ‘ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಜಯ್ ಶಾ ‘ಎಕ್ಸ್‘ ಖಾತೆಯಲ್ಲಿ ಸಂದೇಶ ಹಾಕಿದ್ದಾರೆ.</p>.<p>'ಕ್ರಿಕೆಟ್ ಯಶಸ್ಸಿಗೆ ಇಂತಹ ತೆರೆಮರೆಯ ವ್ಯಕ್ತಿಗಳ ಪರಿಶ್ರಮ ಮತ್ತು ಬದ್ಧತೆಗಳೇ ಕಾರಣ. ಏಷ್ಯಾ ಕಪ್ ಟೂರ್ನಿಯು ಉತ್ತಮವಾಗಿ ನೆರೆವೇರಿದ ಅವರ ಕಾರ್ಯವನ್ನು ಗುರುತಿಸುತ್ತಿರುವುದು ನಮಗೆ ಹೆಮ್ಮೆ ತಂದಿದೆ‘ ಎಂದೂ ಶಾ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ನಡೆದ ಮೈದಾನಗಳಲ್ಲಿ ಕಾರ್ಯನಿರ್ವಹಿಸಿದ ಪಿಚ್ ಕ್ಯೂರೇಟರ್ ಮತ್ತು ಸಿಬ್ಬಂದಿಗಳಿಗೆ ₹ 42 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ.</p>.<p>ಈ ಸಲದ ಏಷ್ಯಾ ಕಪ್ ಟೂರ್ನಿಯಲ್ಲಿ ನಡೆದ ಬಹುತೇಕ ಎಲ್ಲ ಪಂದ್ಯಗಳ ಸಂದರ್ಭದಲ್ಲಿಯೂ ಮಳೆ ಸುರಿದಿದೆ. ಈ ಸಂದರ್ಭಗಳಲ್ಲಿ ಮೈದಾನ ಸಿಬ್ಬಂದಿಯು ಚುರುಕುತನದಿಂದ ಕಾರ್ಯನಿರ್ವಹಿಸಿತ್ತು. ದೇಶ, ವಿದೇಶಗಳ ಕ್ರಿಕೆಟ್ ಪ್ರೇಮಿಗಳು ಮತ್ತು ದಿಗ್ಗಜ ಕ್ರಿಕೆಟಿಗರಿಂದ ಪ್ರಶಂಸೆಯ ಸುರಿಮಳೆಯಾಗಿತ್ತು.</p>.<p>‘ಕ್ರಿಕೆಟ್ ಆಟದ ಎಲೆ ಮರೆಯ ತಾರೆಯರಿಗೆ ಅಪಾರ ಅಭಿನಂದನೆಗಳು. ಅವರಿಗೆ ₹42 ಲಕ್ಷ ಬಹುಮಾನ ಘೋಷಿಸಲು ಹರ್ಷವಾಗುತ್ತಿದೆ. ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯೊಂದಿಗೆ ಈ ಕಾರ್ಯ ಮಾಡುತ್ತಿದ್ದೇವೆ‘ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಜಯ್ ಶಾ ‘ಎಕ್ಸ್‘ ಖಾತೆಯಲ್ಲಿ ಸಂದೇಶ ಹಾಕಿದ್ದಾರೆ.</p>.<p>'ಕ್ರಿಕೆಟ್ ಯಶಸ್ಸಿಗೆ ಇಂತಹ ತೆರೆಮರೆಯ ವ್ಯಕ್ತಿಗಳ ಪರಿಶ್ರಮ ಮತ್ತು ಬದ್ಧತೆಗಳೇ ಕಾರಣ. ಏಷ್ಯಾ ಕಪ್ ಟೂರ್ನಿಯು ಉತ್ತಮವಾಗಿ ನೆರೆವೇರಿದ ಅವರ ಕಾರ್ಯವನ್ನು ಗುರುತಿಸುತ್ತಿರುವುದು ನಮಗೆ ಹೆಮ್ಮೆ ತಂದಿದೆ‘ ಎಂದೂ ಶಾ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>