<p><strong>ದುಬೈ:</strong> ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ ಅಭಿಯಾನದ ವೇಳೆ ವೇಗಿಗಳಾದ ಜಸ್ಪ್ರಿತ್ ಬೂಮ್ರಾ ಹಾಗೂ ಅರ್ಶದೀಪ್ ಸಿಂಗ್ ಅವರ ಪ್ರದರ್ಶನವು ಭಾರತ ತಂಡದ ಪಾಲಿಗೆ ಮಹತ್ವದ್ದಾಗಿರಲಿದೆ ಎಂದು ಟೀಂ ಇಂಡಿಯಾದ ಮಾಜಿ ಕೋಚ್ ಭರತ್ ಅರುಣ್ ಅಭಿಪ್ರಾಯಪಟ್ಟಿದ್ದಾರೆ.</p><p>ಏಷ್ಯಾಕಪ್ ಟೂರ್ನಿಯು ಅಬುಧಾಬಿಯಲ್ಲಿ ನಾಳೆಯಿಂದ (ಸೆ. 9) ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಅಫ್ಗಾನಿಸ್ತಾನ ಹಾಗೂ ಹಾಂಗ್ಕಾಂಗ್ ಮುಖಾಮುಖಿಯಾಗಲಿವೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಬುಧವಾರ (ಸೆ.10) ಯುಎಇ ವಿರುದ್ಧ ಆಡಲಿದೆ.</p><p>2014ರಿಂದ 2021ರ ವರೆಗೆ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಆಗಿದ್ದ ಅರುಣ್, ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅರ್ಶದೀಪ್ಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ ಎಂದು ಹೇಳಿದ್ದಾರೆ.</p><p>'ಅರ್ಶದೀಪ್ ಅವರ ಸಾಮರ್ಥ್ಯದ ಬಗ್ಗೆ ನಮಗೆಲ್ಲ ಗೊತ್ತಿದೆ. ಅವರಿಗೆ ಇಂಗ್ಲೆಂಡ್ನಲ್ಲಿ ಹೆಚ್ಚು ಅವಕಾಶ ಸಿಗಬೇಕಿತ್ತು. ಅಭ್ಯಾಸದ ವೇಳೆ ನೀವು ಎಷ್ಟೇ ಬೌಲಿಂಗ್ ಮಾಡಿದರೂ, ಪಂದ್ಯಗಳಲ್ಲಿ ಆಡುವುದರಿಂದ ಲಯ ಗಳಿಸಲು ಸಾಧ್ಯ' ಎಂದಿದ್ದಾರೆ.</p><p>'ನನ್ನ ಪ್ರಕಾರ, ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದು ಮುಖ್ಯ. ಹೆಚ್ಚು ಆಡದಿರುವುದು ಅರ್ಶದೀಪ್ಗೆ ಸವಾಲಾಗಬಹುದು. ಎಷ್ಟು ಬೇಗನೆ ಲಯ ಕಂಡುಕೊಳ್ಳಲಿದ್ದಾರೆ ಎಂಬುದು ಪ್ರಮುಖವಾಗುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಬೂಮ್ರಾ ಕುರಿತು, ಮೂರು ವಾರದ ಅಂತರದಲ್ಲಿ ಆರು ಟಿ20 ಪಂದ್ಯಗಳನ್ನು ಆಡುವುದು ಅವರಿಗೆ ತೊಂದರೆಯಾಗಬಾರದು ಎಂದು ಅರುಣ್ ಒತ್ತಿ ಹೇಳಿದ್ದಾರೆ.</p><p>'ಬೂಮ್ರಾ ಆಡುವುದನ್ನು ನೋಡಲು ಬಯಸುತ್ತೇನೆ. ಅವರು ಎಲ್ಲ ಪಂದ್ಯಗಳಿಗೂ ಲಭ್ಯರಿರುತ್ತಾರೆ ಎಂದು ಭಾವಿಸುತ್ತೇನೆ. ಆದರೆ, ಅಂತಿಮ ನಿರ್ಧಾರವನ್ನು ಅವರೇ ಕೈಗೊಳ್ಳಬೇಕು. ಈ ಪಂದ್ಯಾವಳಿಯ ಸ್ವರೂಪ ನೋಡಿದರೆ, ಬೂಮ್ರಾಗೆ ವಿಶ್ರಾಂತಿ ಬೇಕಾಗುತ್ತದೆ ಎನಿಸುವುದಿಲ್ಲ. ಹಾಗೊಂದು ವೇಳೆ ಅವರು ಆಡುವುದೇ ಆದರೆ, ಟೂರ್ನಿಯುದ್ದಕ್ಕೂ ಸ್ಥಿರ ಪ್ರದರ್ಶನ ನೀಡುವುದು ಮುಖ್ಯವಾಗುತ್ತದೆ' ಎಂದಿದ್ದಾರೆ.</p><p>ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಎರಡು ಗುಂಪುಗಳಾಗಿ ಸೆಣಸಾಟ ನಡೆಸಲಿವೆ. ಶ್ರೀಲಂಕಾ, ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಗ್ಕಾಂಗ್ 'ಎ' ಗುಂಪಿನಲ್ಲಿವೆ. ಭಾರತ, ಪಾಕಿಸ್ತಾನ, ಯುಎಇ ಹಾಗೂ ಒಮನ್ 'ಬಿ' ಗುಂಪಿನಲ್ಲಿವೆ.</p><p>ಅಗ್ರ ನಾಲ್ಕು ಸ್ಥಾನಗಳಲ್ಲಿ ಉಳಿಯುವ ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಹಂತದಲ್ಲಿ ಮೊದಲೆರಡು ಸ್ಥಾನ ಗಿಟ್ಟಿಸುವ ತಂಡಗಳು ಫೈನಲ್ನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ ಅಭಿಯಾನದ ವೇಳೆ ವೇಗಿಗಳಾದ ಜಸ್ಪ್ರಿತ್ ಬೂಮ್ರಾ ಹಾಗೂ ಅರ್ಶದೀಪ್ ಸಿಂಗ್ ಅವರ ಪ್ರದರ್ಶನವು ಭಾರತ ತಂಡದ ಪಾಲಿಗೆ ಮಹತ್ವದ್ದಾಗಿರಲಿದೆ ಎಂದು ಟೀಂ ಇಂಡಿಯಾದ ಮಾಜಿ ಕೋಚ್ ಭರತ್ ಅರುಣ್ ಅಭಿಪ್ರಾಯಪಟ್ಟಿದ್ದಾರೆ.</p><p>ಏಷ್ಯಾಕಪ್ ಟೂರ್ನಿಯು ಅಬುಧಾಬಿಯಲ್ಲಿ ನಾಳೆಯಿಂದ (ಸೆ. 9) ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಅಫ್ಗಾನಿಸ್ತಾನ ಹಾಗೂ ಹಾಂಗ್ಕಾಂಗ್ ಮುಖಾಮುಖಿಯಾಗಲಿವೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಬುಧವಾರ (ಸೆ.10) ಯುಎಇ ವಿರುದ್ಧ ಆಡಲಿದೆ.</p><p>2014ರಿಂದ 2021ರ ವರೆಗೆ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಆಗಿದ್ದ ಅರುಣ್, ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅರ್ಶದೀಪ್ಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ ಎಂದು ಹೇಳಿದ್ದಾರೆ.</p><p>'ಅರ್ಶದೀಪ್ ಅವರ ಸಾಮರ್ಥ್ಯದ ಬಗ್ಗೆ ನಮಗೆಲ್ಲ ಗೊತ್ತಿದೆ. ಅವರಿಗೆ ಇಂಗ್ಲೆಂಡ್ನಲ್ಲಿ ಹೆಚ್ಚು ಅವಕಾಶ ಸಿಗಬೇಕಿತ್ತು. ಅಭ್ಯಾಸದ ವೇಳೆ ನೀವು ಎಷ್ಟೇ ಬೌಲಿಂಗ್ ಮಾಡಿದರೂ, ಪಂದ್ಯಗಳಲ್ಲಿ ಆಡುವುದರಿಂದ ಲಯ ಗಳಿಸಲು ಸಾಧ್ಯ' ಎಂದಿದ್ದಾರೆ.</p><p>'ನನ್ನ ಪ್ರಕಾರ, ಪಂದ್ಯಗಳಲ್ಲಿ ಬೌಲಿಂಗ್ ಮಾಡುವುದು ಮುಖ್ಯ. ಹೆಚ್ಚು ಆಡದಿರುವುದು ಅರ್ಶದೀಪ್ಗೆ ಸವಾಲಾಗಬಹುದು. ಎಷ್ಟು ಬೇಗನೆ ಲಯ ಕಂಡುಕೊಳ್ಳಲಿದ್ದಾರೆ ಎಂಬುದು ಪ್ರಮುಖವಾಗುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಬೂಮ್ರಾ ಕುರಿತು, ಮೂರು ವಾರದ ಅಂತರದಲ್ಲಿ ಆರು ಟಿ20 ಪಂದ್ಯಗಳನ್ನು ಆಡುವುದು ಅವರಿಗೆ ತೊಂದರೆಯಾಗಬಾರದು ಎಂದು ಅರುಣ್ ಒತ್ತಿ ಹೇಳಿದ್ದಾರೆ.</p><p>'ಬೂಮ್ರಾ ಆಡುವುದನ್ನು ನೋಡಲು ಬಯಸುತ್ತೇನೆ. ಅವರು ಎಲ್ಲ ಪಂದ್ಯಗಳಿಗೂ ಲಭ್ಯರಿರುತ್ತಾರೆ ಎಂದು ಭಾವಿಸುತ್ತೇನೆ. ಆದರೆ, ಅಂತಿಮ ನಿರ್ಧಾರವನ್ನು ಅವರೇ ಕೈಗೊಳ್ಳಬೇಕು. ಈ ಪಂದ್ಯಾವಳಿಯ ಸ್ವರೂಪ ನೋಡಿದರೆ, ಬೂಮ್ರಾಗೆ ವಿಶ್ರಾಂತಿ ಬೇಕಾಗುತ್ತದೆ ಎನಿಸುವುದಿಲ್ಲ. ಹಾಗೊಂದು ವೇಳೆ ಅವರು ಆಡುವುದೇ ಆದರೆ, ಟೂರ್ನಿಯುದ್ದಕ್ಕೂ ಸ್ಥಿರ ಪ್ರದರ್ಶನ ನೀಡುವುದು ಮುಖ್ಯವಾಗುತ್ತದೆ' ಎಂದಿದ್ದಾರೆ.</p><p>ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಎರಡು ಗುಂಪುಗಳಾಗಿ ಸೆಣಸಾಟ ನಡೆಸಲಿವೆ. ಶ್ರೀಲಂಕಾ, ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಗ್ಕಾಂಗ್ 'ಎ' ಗುಂಪಿನಲ್ಲಿವೆ. ಭಾರತ, ಪಾಕಿಸ್ತಾನ, ಯುಎಇ ಹಾಗೂ ಒಮನ್ 'ಬಿ' ಗುಂಪಿನಲ್ಲಿವೆ.</p><p>ಅಗ್ರ ನಾಲ್ಕು ಸ್ಥಾನಗಳಲ್ಲಿ ಉಳಿಯುವ ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಹಂತದಲ್ಲಿ ಮೊದಲೆರಡು ಸ್ಥಾನ ಗಿಟ್ಟಿಸುವ ತಂಡಗಳು ಫೈನಲ್ನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>